1:37 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್ ಸೀಟು ಪಡೆದ ಕತೆ!!

07/09/2024, 18:31

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ತೊಟ್ಟಿಲು ತೂಗಿದ ಕೈಗಳು ಇಡೀ ದೇಶವನ್ನೇ ಆಳ್ವಿಕೆ ಮಾಡಿದ ಉದಾಹರಣೆ ನಮ್ಮುಂದೆ ಇರುವಾಗ ಛಲವೊಂದಿದ್ದರೆ, ಏನನ್ನೂ ಸಾಧಿಸಬಹುದು ಎನ್ನುವುದು ಮತ್ತಷ್ಟು ಸ್ಷಷ್ಟ. ಇದಕ್ಕೊಂದು ನಮ್ಮ ನಿಮ್ಮ ನಡುವಿನ ಹುಡ್ಗಿಯೊಬ್ಬಳು ನಿದರ್ಶನ.
ಮಂಗಳೂರು ಹೊರವಲಯದ ಕೊಣಾಜೆ ಮುಟಿಂಜ ನಿವಾಸಿ ಪದ್ಮನಾಭ ಬಂಗೇರ ಹಾಗೂ ನೀರಜಾ ಅವರ ಪುತ್ರಿ ತನ್ವಿ ಛಲದಿಂದ ಗೆದ್ದಾಕೆ.ತನ್ವಿ ತಾಯಿ ಖಾಸಗಿ ಏಜೆನ್ಸಿಯಲ್ಲಿ ಅಕೌಂಟೆಂಟ್, ತಂದೆ ಮೇಸ್ತ್ರಿ. ಆರ್ಥಿಕವಾಗಿ ಅಷ್ಟೇನು ಗಟ್ಟಿಗರಲ್ಲ. ಆದರೆ ಪ್ರತಿಭೆ ಆ ಹುಡುಗಿಗೆ ಬೆನ್ನೆಲುಬು ತರಹ ಸಹಾಯ ಮಾಡಿತು. ಎಸ್‌ಎಸ್‌ಎಲ್‌ಸಿಯಲ್ಲಿ 613 ಅಂಕ, ಪಿಯುಸಿಯಲ್ಲಿ 575 ಅಂಕ ಪಡೆದವಳಾಕೆ. ವೈದ್ಯೆಯಾಗುವ ಕನಸು ಕಂಡಿದ್ದಳು. ಮಗಳು ವೈದ್ಯೆಯಾಗಬೇಕು ಎಂಬುದು ಪೋಷಕರ ಕನಸು ಕೂಡ ಆಗಿತ್ತು. ಆದರೆ ಲಕ್ಷಗಟ್ಟಲೆ ಶುಲ್ಕ ಪಾವತಿಸಿ ಎಂಬಿಬಿಎಸ್ ಓದುವುದು ಅವರಿಗೆ ಕನಸಿನ ಮಾತಾಗಿತ್ತು. ಈ ನಡುವೆ ಕಳೆದ ವರ್ಷದ ನೀಟ್ (NEET) ಪರೀಕ್ಷೆಯಲ್ಲಿ ಆಕೆ 720ಕ್ಕೆ 457 ಅಂಕಗಳನ್ನು ಗಳಿಸಿ 1,55,670 ರ್ಯಾಂಕ್ ಪಡೆದಿದ್ದಳು. ಈ ಶ್ರೇಣಿಯಲ್ಲಿ ಆಕೆ ಎಂಬಿಬಿಎಸ್ ಸೀಟು ಪಡೆದಿದ್ದರೂ, ಲಕ್ಷಾಂತರ ಶುಲ್ಕವನ್ನು ಪಾವತಿಸಬೇಕಾಗಿತ್ತು. ಈ ವೇಳೆ ಪೋಷಕರು ತನ್ವಿಗೆ ನರ್ಸಿಂಗ್ ಓದುವುದೇ ಸೂಕ್ತ ಎಂದು ನಿರ್ಧರಿಸಿದ್ದರು. ಆದರೆ ವೈದ್ಯಳಾಗುವ ಕನಸಿಗೆ ಮಾತ್ರ ಹಿಂದೆ ಸರಿಯಲಿಲ್ಲ. ಅಷ್ಟರಲ್ಲಿ ನಾನೇಕೆ ನೀಟ್ ಓದಿ ಮತ್ತೆ ಎಂಬಿಬಿಎಸ್ ಸೀಟು ಪಡೆಯಬಾರದು ಎಂದು ಹಠಕ್ಕೆ ಬಿದ್ದಳು. ಮಂಗಳೂರಿನಲ್ಲಿ ಎಂಬಿಬಿಎಸ್ ಸೀಟು ಪಡೆಯಬೇಕೆಂದು ಹಠಕ್ಕೆ ಬಿದ್ದು ಯೆನೆಪೊಯದಲ್ಲಿ ಉಚಿತ ಕೋಚಿಂಗ್ ಪಡೆದು ಈ ವರ್ಷ ನೀಟ್ ನಲ್ಲಿ 720ರಲ್ಲಿ 647 (28,782 ಆಲ್ ಇಂಡಿಯಾ ರ್ಯಾಂಕ್) ಗಳಿಸಿದ್ದಾಳೆ. ಮಂಗಳೂರು ಕೆಎಂಸಿಯಲ್ಲಿ ಎಂಬಿಬಿಎಸ್ ಸೀಟು ಪಡೆದು ವಿದ್ಯಾರ್ಥಿಗಳಿಗೆ ಮಾದರಿ ಎನಿಸಿದ್ದಾಳೆ. ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ತನ್ವಿಯ ಮುಂದಿನ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು