4:34 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕಳ್ಳ, ಹುಚ್ಚು ನಾಯಿ‌ ರೀತಿ ನನ್ನನ್ನ ಅಟ್ಟಾಡಿಸಿ ಹಲ್ಲೆ ನಡೆಸಿದರು: ಮೂಡಿಗೆರೆ ಶಾಸಕ ಕುಮಾರಸ್ವಾಮಿ

22/11/2022, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು. ಕಳ್ಳ, ಹುಚ್ಚು ನಾಯಿ‌ ರೀತಿ ನನ್ನನ್ನ ಅಟ್ಟಾಡಿಸಿದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹೇಳಿದರು.

ಮಾಧ್ಯಮ ಜತೆ ಮಾತನಾಡಿದ ಅವರು, ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊಡೆದರು.
ಬನಿಯನ್ ಇತ್ತು ಬಟ್ಟೆ ಹರಿದದ್ದು ಕಾಣಲಿಲ್ಲ, ಬನಿಯನ್ ತೆಗೆದರೆ ಹರಿದದ್ದು ಕಾಣುತ್ತೆ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ ಎಂದು ಪ್ರಶ್ನಿಸಿದರು.

ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ.
ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ವ್ಯವಸ್ಥಿತ ಹಲ್ಲೆ ನಡೆಸಿದ್ದಾರೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಅವರು ನುಡಿದರು.
ನಾನು ಒಂದೇ ಒಂದು ಮಾತನಾಡಿಲ್ಲ, ಬಹಳ ಸಂಚು ಮಾಡಿ ಹಲ್ಲೆ ಮಾಡಿದ್ದಾರೆ.

ನನ್ನ ಮೂಲಕ ಎಲ್ಲಾ ಶಾಸಕರಿಗೂ ಸರ್ಕಾರ ಭದ್ರತೆ ನೀಡಬೇಕು. ನಾನು ಕಾಡು ಕಾಯಲ್ಲ, ಆನೆ ಸಾಕಿಲ್ಲ, ಸರ್ಕಾರಕ್ಕೆ ದೂರು ನೀಡಬಹುದು, ನೀಡುತ್ತೇನೆ ಎಂದು ಅವರು ನುಡಿದರು.

ನಾನು ಕೋರ್ಟ್ ಅಲ್ಲ, ಕ್ಷೇತ್ರಕ್ಕೆ ಸಾಕಷ್ಟು ಹಣ ತಂದಿದ್ದೇನೆ.
ಇಂದು ಹೋಗಿ ಎಲ್ಲರಿಗೂ ಸಾಂತ್ವನ ಹೇಳಿದ್ದೇನೆ.
ಆನೆ ಸ್ಥಳಾಂತರಕ್ಕೆ ನಾಳೆಯೇ ಕ್ರಮ ಕೈಗೊಳ್ಳುತ್ತೇವೆ, ಬೆಂಗಳೂರಿಗೆ ಹೋಗುತ್ತೇನೆ. ಈ ಬಗ್ಗೆ ವರಿಷ್ಟರು, ಸಿಎಂ, ಗೃಹ ಮಂತ್ರಿ ಗಮನಕ್ಕೆ ತರುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು