6:57 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಕಳ್ಳ, ಹುಚ್ಚು ನಾಯಿ‌ ರೀತಿ ನನ್ನನ್ನ ಅಟ್ಟಾಡಿಸಿ ಹಲ್ಲೆ ನಡೆಸಿದರು: ಮೂಡಿಗೆರೆ ಶಾಸಕ ಕುಮಾರಸ್ವಾಮಿ

22/11/2022, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು. ಕಳ್ಳ, ಹುಚ್ಚು ನಾಯಿ‌ ರೀತಿ ನನ್ನನ್ನ ಅಟ್ಟಾಡಿಸಿದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹೇಳಿದರು.

ಮಾಧ್ಯಮ ಜತೆ ಮಾತನಾಡಿದ ಅವರು, ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊಡೆದರು.
ಬನಿಯನ್ ಇತ್ತು ಬಟ್ಟೆ ಹರಿದದ್ದು ಕಾಣಲಿಲ್ಲ, ಬನಿಯನ್ ತೆಗೆದರೆ ಹರಿದದ್ದು ಕಾಣುತ್ತೆ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ ಎಂದು ಪ್ರಶ್ನಿಸಿದರು.

ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ.
ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ವ್ಯವಸ್ಥಿತ ಹಲ್ಲೆ ನಡೆಸಿದ್ದಾರೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಅವರು ನುಡಿದರು.
ನಾನು ಒಂದೇ ಒಂದು ಮಾತನಾಡಿಲ್ಲ, ಬಹಳ ಸಂಚು ಮಾಡಿ ಹಲ್ಲೆ ಮಾಡಿದ್ದಾರೆ.

ನನ್ನ ಮೂಲಕ ಎಲ್ಲಾ ಶಾಸಕರಿಗೂ ಸರ್ಕಾರ ಭದ್ರತೆ ನೀಡಬೇಕು. ನಾನು ಕಾಡು ಕಾಯಲ್ಲ, ಆನೆ ಸಾಕಿಲ್ಲ, ಸರ್ಕಾರಕ್ಕೆ ದೂರು ನೀಡಬಹುದು, ನೀಡುತ್ತೇನೆ ಎಂದು ಅವರು ನುಡಿದರು.

ನಾನು ಕೋರ್ಟ್ ಅಲ್ಲ, ಕ್ಷೇತ್ರಕ್ಕೆ ಸಾಕಷ್ಟು ಹಣ ತಂದಿದ್ದೇನೆ.
ಇಂದು ಹೋಗಿ ಎಲ್ಲರಿಗೂ ಸಾಂತ್ವನ ಹೇಳಿದ್ದೇನೆ.
ಆನೆ ಸ್ಥಳಾಂತರಕ್ಕೆ ನಾಳೆಯೇ ಕ್ರಮ ಕೈಗೊಳ್ಳುತ್ತೇವೆ, ಬೆಂಗಳೂರಿಗೆ ಹೋಗುತ್ತೇನೆ. ಈ ಬಗ್ಗೆ ವರಿಷ್ಟರು, ಸಿಎಂ, ಗೃಹ ಮಂತ್ರಿ ಗಮನಕ್ಕೆ ತರುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು