7:34 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಲ್ಲಬೆಟ್ಟು: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ಪ್ರಬಂಧ ಸ್ಪರ್ಧೆ 

09/08/2022, 10:33

ಮೂಡುಬಿದ್ರೆ(reporterkarnataka.com): ಸಾರ್ವಜನಿಕ  ಶ್ರೀ ಸತ್ಯನಾರಾಯಣ  ಸಮಿತಿ ಕಲ್ಲಬೆಟ್ಟು ಇದರ ಆಶಯದಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಲ್ಲಬೆಟ್ಟುವಿನಲ್ಲಿ ನಡೆಯಿತು.

ಮೂಡಬಿದರೆ ಪುರಸಭಾ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಲ್ಲಬೆಟ್ಟುವಿನಲ್ಲಿ ನಾನು ಮೆಚ್ಚಿದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿಕಾರಿಗಳ ಪಾತ್ರದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮವನ್ನು ಪೂಜಾ ಸಮಿತಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅವರು ಉದ್ಘಾಟಿಸಿ, ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನದ ಬಗ್ಗೆ ಸ್ಮರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಡು ಸದಾಶಿವ ರಾವ್, ಎಂ. ಡಿ.  ಅಧಿಕಾರಿ ಮತ್ತು  ಕಲಾವತಿ ಅಧಿಕಾರಿ ಇತರ ಹೋರಾಟಗಾರರ ತ್ಯಾಗ ಬಲಿದಾನ ಬಲಿದಾನವನ್ನು  ಸ್ಮರಿಸಿದರು.

 ಶಾಲಾ ಶಿಕ್ಷಕಿ ಅನಿತಾ ಎಲ್. ಸುಕೇರ ರವರು ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾರ್ಗರೇಟಾ ಎ.ಎಂ., ಪೂಜಾ ಸಮಿತಿಯ ಖಾಜಾಂಜಿ ಕರುಣಾಕರ ಶೆಟ್ಟಿ, ಜಯ ಕನ್ನಡಮ್ಮ ಪತ್ರಿಕೆಯ ಕೃಷ್ಣಕುಮಾರ್, ಎಸ್.ಡಿ.ಎಂ. ಉಪಾಧ್ಯಕ್ಷೆ ಪ್ರತಿಭಾ ಹಾಗೂ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ರಾಷ್ಟ್ರ ಧ್ವಜ ವನ್ನು ವಿತರಿಸಲಾಯಿತು. 2022, ಡಿಸೆಂಬರ್ 12ರಂದು ಪೂಜಾ ಸಮಿತಿಯ ಧಾರ್ಮಿಕ ಸಭೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ವಿತರಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು