4:11 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಕಲ್ಲಚ್ಚು ಪ್ರಕಾಶನದ ರಜತ ರಂಗು: ನ.1ರಂದು ಕನ್ನಡ ಕಣ್ಮನಗಳ ಕಲರವ

30/10/2025, 18:09

ಮಂಗಳೂರು(reporterkarnataka.com): ಬೆಳ್ಳಿಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ” ಕನ್ನಡ ಕಣ್ಮನಗಳ ಕಲರವ” ಸಮಾರಂಭ ನವಂಬರ್ 1ರಂದು ಸಂಜೆ 4.00 ಗಂಟೆಗೆ ನಗರದ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕಲ್ಲಚ್ಚು ರಾಜ್ಯೋತ್ಸವ ಪುರಸ್ಕಾರವನ್ನು ಪ್ರದೀಪ ನಾಯಕ್ ಮದ್ದಡ್ಕರವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ರಾಮಚಂದ್ರ ಬೈಕಂಪಾಡಿ ಉದ್ಘಾಟಿಸುವರು. ಉಪನ್ಯಾಸಕ ಕರುಣಾಕರ ಬಳ್ಕೂರು ರಾಜ್ಯೋತ್ಸವ ಸಂದೇಶ ನೀಡಲಿದ್ದು ಸಾಹಿತಿಗಳಾದ ಶಮೀಮ ಕುತ್ತಾರ್ ಮತ್ತು ಇಜಾಕ್ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರಾವಳಿಯ ಹಿರಿ – ಕಿರಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ಅನೇಕ ಸಾಧಕರು ಮಾತು ಮಂಥನ, ಕಥೆ ಕವಿತೆಯಲ್ಲಿ ಪಾಲ್ಗೊಳ್ಳಲಿದ್ದು ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಾಹಿತಿ ಪ್ರಕಾಶಕ ಮಹೇಶ ಆರ್. ನಾಯಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು