10:19 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀ ರಾಮ ಮಂದಿರ ಶತಾಬ್ದಿ ಸಂಭ್ರಮ: 13 ಕೋಟಿ ರಾಮನಾಮ ಜಪ ಯಜ್ಞ; ಸಾಧಕರಿಗೆ ಸನ್ಮಾನ

25/02/2024, 16:27

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮದಲ್ಲಿ ಹಿನ್ನಲೆಯಲ್ಲಿ 13 ಕೋಟಿ ರಾಮನಾಮ ಜಪ ಯಜ್ಞವು ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಪೌರೋಹಿತ್ಯದಲ್ಲಿ ಶನಿವಾರ ನಡೆಯಿತು.
ಭಜನಾ ಮಂದಿರದ ಸೇವೆಯೊಂದಿಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕಲ್ಲಡ್ಕ ಪರಿಸರದ 30 ಮಂದಿ ಸಾಧಕರನ್ನು ಗ್ರಾಮ ಸಮ್ಮಾನವನ್ನಿತ್ತು ಗೌರವಿಸಲಾಯಿತು.
ಸನ್ಮಾನಿತರು: ಮಾಜಿ ಶಾಸಕ ರುಕ್ಮಯ ಪೂಜಾರಿ,ರಶ್ಮಿತಾ ಯುವರಾಜ ಜೈನ್,ಚಂದ್ರಶೇಖರ ಆಚಾರ್ಯರಾಮನಗರ , ನಾಗೇಶ್ ಕಲ್ಲಡ್ಕ, ವಸಂತ ಮಾಧವ,ರಮೇಶ ಎನ್, ಚಿ.ರಮೇಶ ಕಲ್ಲಡ್ಕ,ಎನ್. ರಾಜೇಂದ್ರ ಹೊಳ್ಳ, ರುಕ್ಮಯ ನಲಿಕೆ ಕೊಳಕೀರು, ಶಾರದಾ ಜಿ.,ಎಂ.ವಸಂತ ರಾವ್ ಕಲ್ಲಡ್ಕ,
ಕೊರಗಪ್ಪ ಬೊಂಡಾಲ, ನಳಿನಿ ಪ್ರದೀಪ್ ರಾವ್,ಚಿದಾನಂದ ಆಚಾರ್ಯ ಕಲ್ಲಡ್ಕ,
ಕೊರಗಪ್ಪ ಕೊಟ್ಟಾರಿ ಕೋಳಕೀರು,
ರಮೇಶ್ ಆಚಾರ್ ಕಲ್ಲಡ್ಕ,ಡೊಂಬಯ್ಯ ಟೈಲರ್ ಕಲ್ಲಡ್ಕ,ತಾರಾನಾಥ ಬಂಗೇರ ಕಲ್ಲಡ್ಕ, ವಿಠಲ ಪ್ರಭು ಮಕ್ಕಾರು,ಸತೀಶ ಆಚಾರ್ಯ ಕಲ್ಲಡ್ಕ,
ಶಿವರಾಮ ಹೊಳ್ಳ ಕಲ್ಲಡ್ಕ, ವೀರಪ್ಪ ಮೂಲ್ಯ ಕಲ್ಲಡ್ಕ, ಶ್ರೀಧರ ಶೆಟ್ಟಿ ಬೊಂಡಾಲ,ಶಂಕರ ಐತಾಳ್ ಓಣಿಬೈಲು, ಶ್ರೀನಿಧಿ ಆರ್ .ಎಸ್.ಕೊಳಕೀರು ,ಸರಸ್ವತೀ ನಾಗೇಶ್ ನಿಟಿಲಾಪುರ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಜಗನ್ನಾಥ ಬಂಗೇರ‌,ಮೋಹನ ರಾವ್ ಅವರು ಗ್ರಾಮ ಸಮ್ಮಾನ ಸ್ವೀಕರಿಸಿದರು.
ಶಿವಕುಮಾರ್,ಯತಿರಾಜ ಪಿ.,ಸೌಮ್ಯ‌ಮಾತಾಜಿ,ನಾರಾಯಣ ಗೌಡ,ಗೋಪಾಲ್ ಅವರು ಸಮ್ಮಾನಿತರನ್ನು ಪರಿಚಯಿಸಿದರು.
ಬೆಳಿಗ್ಗೆ ಶ್ರೀ ರಾಮ ವಿದ್ಯಾಕೇಂದ್ರದ ವಿದ್ಯಾರ್ಥಿ ಗಳಿಂದ ಭಜನೆ, ರಾಮನಾಮ ತಾರಕ ಪೂರ್ಣಾಹುತಿ ಬಳಿಕ ಮಂಗಳರಾತಿ,ಸಾರ್ವಜನಿಕ ಅನ್ನಸಂತರ್ಪಣೆ,ಮಧ್ಯಾಹ್ನ ದ ನಂತರ ಶ್ರೀ ಕೋದಂಡರಾಮ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದಿಂದ “ಶ್ರೀ ರಾಮ ಪಟ್ಟಾಭಿಷೇಕ” ಯಕ್ಷಗಾನ ಬಯಲಾಟ ಪ್ರದರ್ಶನ ಗೊಂಡಿತು.ಸಂಜೆ ಧ್ವಜಾವತರಣದ ಬಳಿಕ ವಾರದ ಭಜನಾ ಸಂಕೀರ್ತನೆ ನಡೆಯಿತು.
ಸಂಸದ,ಶಾಸಕರ ಭೇಟಿ:
ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಹೈಕೋಟ್೯ ನ್ಯಾಯವಾದಿ ಅರುಣ ಶ್ಯಾಮ, ಎಸ್ ಡಿ ಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ , ಉದ್ಯಮಿ ರಘುನಾಥ ಸೋಮಯಾಜಿ,ಹರಿಪ್ರಸಾದ ಪೆರಿಯಾಪು,ಡಾ.ಕಮಲಾ ಪ್ರಭಾಕರ ಭಟ್ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು