7:39 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಲ್ಲಡ್ಕ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು: ಕಾಲೇಜಿಗೆ ಹೊರಟವಳು ಮನೆಗೆ ಹಿಂತಿರುಗಿ ಆತ್ಮಹತ್ಯೆ

09/03/2023, 22:06

ಬಂಟ್ವಾಳ(reporterkarnataka.com):
ಕಲ್ಲಡ್ಕದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ವೈಷ್ಣವಿ(18) ಎಂದು ಗುರುತಿಸಲಾಗಿದೆ. ಈಕೆ ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಯ ಪುತ್ರಿ.

ವೈಷ್ಣವಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಈ ಹಿಂದೆ ಭಗವದ್ಗೀತೆಯ 700 ಶ್ಲೋಕವನ್ನು ಕಂಠಪಾಠ ಮಾಡಿ ಹೇಳುವ ಸ್ಪರ್ಧೆಯಲ್ಲಿ ಜಿಲ್ಲಾ ಪ್ರಶಸ್ತಿ ಪಡೆದಿದ್ದಳು. ಕಾಲೇಜಿಗೆಂದು ಹೊರಟ ವೈಷ್ಣವಿ ಮನೆಗೆ ಹಿಂದಿರುಗಿ ಬಂದಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೆ ನೈಜ ಕಾರಣವೇನು ಎಂಬ ಬಗ್ಗೆ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು