1:54 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

Kalladka | ನಿಟಿಲಾಪುರ ಸದಾಶಿವ ದೇವಸ್ಥಾನ: ಮೇ 2ರಿಂದ 4ರ ವರೆಗೆ ಅತಿಮಹಾರುದ್ರಯಾಗ

01/05/2025, 16:32

ಬಂಟ್ವಾಳ(reporterkarnataka.com):ಅತಿಮಹಾರುದ್ರಯಾಗ ಸಮಿತಿ ವತಿಯಿಂದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2ರಿಂದ ಮೇ 4 ರವರಗೆ ಅತಿಮಹಾರುದ್ರಯಾಗ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ತಿಳಿಸಿದ್ದಾರೆ.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.
ಈ ಯಾಗದ ಅಂಗವಾಗಿ ಚಾಂದ್ರಮಾನ ಯುಗಾದಿಯ ಸಂದರ್ಭದಲ್ಲಿ ದೀಪ ಪ್ರಜ್ವಲಿಸಿ ಪ್ರಾರಂಭವಾದ ಪಾರಾಯಣ ಎ. 29ರ ವರೆಗೆ 18158 ಪಾರಾಯಣಗಳು ಪೂರ್ತಿಯಾಗಿದೆ.
ವಾರಣಾಸಿಯ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಾಡಿನ ಸಮಸ್ತ ಸಂಸ್ಥಾನದ‌ ಮಠಾಧೀಶರುಗಳ ದಿವ್ಯ ಉಪಸ್ಥಿತಿ, ವಿವಿಧ ಪುಣ್ಯ ಕ್ಷೇತ್ರಗಳ ಧರ್ಮಾಧಿಕಾರಿಗಳು , ಧರ್ಮದರ್ಶಿಗಳು, ಧಾರ್ಮಿಕ ಮುಖಂಡರುಗಳ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಲೋಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ ಸಂಕಲ್ಪದಂತೆ ನಡೆಯಲಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕವಾಗಿಯೇ ಏರ್ಪಡಿಸುತ್ತಿರುವುದು ಯಾಗದ ವಿಶೇಷವಾಗಿದೆ ಎಂದು ಹೇಳಿದರು.
ಮೇ 2ರಂದು ಶತರುದ್ರಾಭಿಷೇಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ 3ರಂದು ಕ್ಷೇತ್ರಕ್ಕೆ ಕಲ್ಲಡ್ಕ ಪೇಟೆಯಿಂದ ಹಸಿರು ಹೊರೆಕಾಣಿಕೆ ಶೋಭಯಾತ್ರೆ ನಡೆಯಲಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಮೇ 4ರಂದು ಅತಿಮಹಾರುದ್ರಯಾಗ ನಡೆಯಲಿದ್ದು, ಸಂಜೆ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ಮೂರು ದಿನಗಳಲ್ಲಿ ಸಾವಿರಾರು ಭಕ್ತರು ಯಾಗದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಚಿನ್ ರೈ ಮಾಣಿ, ಅಜಿತ್ ಕುಮಾರ್ ಬರಿಮಾರ್, ಗಣೇಶ್ ಶೆಟ್ಟಿ ಗೋಳ್ತಮಜಲು, ತೋಟ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಉಪಸ್ಥಿತರಿದ್ದರು. ಕಲ್ಲಡ್ಕದಿಂದ ನೆಟ್ಲ ಕ್ಷೇತ್ರಕ್ಕೆ ವಾಹನ ವ್ಯವಸ್ಥೆ ಮಾಡಲಾಗುವುದು. ಪ್ರತಿದಿನ ಸಹಸ್ರಾರು ಮಂದಿ ಬರುವ‌ ಭಕ್ತಾದಿಗಳಿಗೆ ಅನ್ನಸಂತರ್ಪಣೆ, ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು