6:50 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕಲ್ಲಡ್ಕ: ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಜಿಲ್ಲಾ ಘಟಕ ರಚನೆ

15/01/2023, 10:06

ಬಂಟ್ವಾಳ(reporterkarnataka.com): ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕ ರಚನೆ ಮಾಡಲಾಯಿತು.

ಜಿಲ್ಲೆಯ ವಿವಿಧ ತಾಲೂಕು ಘಟನೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ ಈ ಸಭೆಯನ್ನು ಬಂಟ್ವಾಳ ತಾಲೂಕು ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರಾದ ಮಜಿ ಶಾಲೆಯ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎಸ್.ಕೆ ಅಧ್ಯಕ್ಷತೆ ವಹಿಸಿ , ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿದರು.

ಜಿಲ್ಲಾ ಘಟಕಕ್ಕೆ ಈ ಕೆಳಗಿನ ಪದಾಧಿಕಾರಿಗಳು ಆಯ್ಕೆಯಾದರು .
ಗೌರವಾಧ್ಯಕ್ಷರು : ಮಜಿ ಶಾಲೆಯ ನಾರಾಯಣ ಪೂಜಾರಿ ಎಸ್.ಕೆ.
ಅಧ್ಯಕ್ಷರು : ನಿಂಗರಾಜು ಕೆ.ಪಿ ಅಲಂಕಾರು ಕಡಬ
ಉಪಾಧ್ಯಕ್ಷರು : ಬಾಬು ಟಿ ಹಿರೆಬಂಡಾಡಿ ಮತ್ತು ಶ್ರೀ ಮಹಾಲಿಂಗ ಬೆಳ್ತಂಗಡಿ .
ಪ್ರಧಾನಕಾರ್ಯದರ್ಶಿ :ಗೋಪಾಲಕೃಷ್ಣ ಬನ ಸುಳ್ಯ
ಜತೆ ಕಾರ್ಯದರ್ಶಿ : ಪ್ರೇಮ ಕೆ.ಕೆ.ಕಾವಳಮುಡೂರು
ಮತ್ತು ಶಾರದಾ ಕಡಬ
ಕೋಶಾಧಿಕಾರಿ: ಪುಟ್ಟರಂಗನಾಥ ಟಿ ಬಂಟ್ವಾಳ
ಸಂಘಟನಾ ಕಾರ್ಯದರ್ಶಿಗಳಾಗಿ ಸುನಂದಾ ಸುಳ್ಯ ಮತ್ತು ಸುರೇಶ್ ಬೆಳ್ತಂಗಡಿ .
ನಿರ್ದೇಶಕರು :ಶಂಕರ್ ನಾರ್ಶಮೈದಾನ ಮತ್ತು ಮಹೇಶ್ ಕಡಬ ಆಯ್ಕೆಯಾದರು .



ಅಧ್ಯಕ್ಷರಾಗಿ ಆಯ್ಕೆಯಾದ ನಿಂಗರಾಜ್ ಕೆ.ಪಿ. ಯವರು ಮಾತನಾಡಿ ಎಲ್ಲಾ ಶಿಕ್ಷಕರು ಸಹಕಾರ ನೀಡುವಂತೆ ,ಮುಖ್ಯ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸಂಘದೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆಂಬ ಭರವಸೆಯನ್ನು ನೀಡಿದವರು .

ದೇವಕಿ ಮೋಂತಿಮಾರು ಮತ್ತು ದಾಮೋದರ ಸರ್ಕಳ ನಿರೂಪಿಸಿದ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶಾಲೆಯ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ,ಸುಳ್ಯದ ಅಧ್ಯಕ್ಷರಾದ ದೇವರಾಜ್ ,ಬೆಳ್ತಂಗಡಿಯ ಅಧ್ಯಕ್ಷರಾದ ಬಾಲಕೃಷ್ಣ , ಪುತ್ತೂರು ಕಾರ್ಯದರ್ಶಿ ತಾರನಾಥ್ ವೀರಮಂಗಲ, ಪಾಂಡವರಕಲ್ಲು ನವೀನಾ ಕುಮಾರಿ ,ಮದ್ವದ ಭವಾನಿ ,ಆನಂದ ಕೆಮ್ಮಾನುಪಲ್ಕೆ ,ಗೋಪಾಲ ಸುರಿಬೈಲು, ಶಿವರಾಮ್ ಭಟ್ ಮಿತ್ತನಡ್ಕ ,ಚಂದ್ರಾವತಿ ಮಾಣಿ ಮತ್ತು ಎಲ್ಲಾ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪುಟ್ಟರಂಗನಾಥ ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು