ಇತ್ತೀಚಿನ ಸುದ್ದಿ
ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಖಾಸಗಿ ಬಸ್; ಪ್ರಯಾಣಿಕರು ಸೇಫ್
26/05/2025, 23:44

ಬಂಟ್ವಾಳ(reporterkarnataka.com): ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಯಲ್ಲಿ ವಾಲಿ ನಿಂತ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಅದೃಷ್ಟವಶಾತ್ ಬಸ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯ ರಭಸಕ್ಕೆ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.