10:39 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿ: ತೈಲ ಟ್ಯಾಂಕರ್ ಸ್ಫೋಟ; ರಸ್ತೆಗೆ ಚೆಲ್ಲಿದ ಆಯಿಲ್; ಸಂಚಾರ ಅಸ್ತವ್ಯಸ್ತ

22/12/2023, 18:39

ಬಂಟ್ವಾಳ(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ ಘಟನೆ ನಡೆದಿದೆ. ಇದರಿಂದ ಹೆದ್ದಾರಿಯಲ್ಲಿ ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು.
ಮಂಗಳೂರಿನಿಂದ ಕಲ್ಲಿದ್ದಲನ್ನು ಹೇರಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಲಾರಿ ನರಹರಿ ಪರ್ವತದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆಯಿತು. ಡಿಕ್ಕಿಯಾದ ರಭಸಕ್ಕೆ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಲಾರಿಗಳೆರಡರ ತೈಲ ತುಂಬಿದ ಟ್ಯಾಂಕ್ ಸ್ಫೋಟಗೊಂಡು ತೈಲ ಪೂರ್ತಿ ರಸ್ತೆಯಲ್ಲಿ ಚೆಲ್ಲಿದ್ದು,ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮ ಒಂದು ಬದಿಯಿಂದ ಮೆಲ್ಕಾರ್ ವರೆಗೂ ಇನ್ನೊಂದು ಬದಿಯಿಂದ ಕಲ್ಲಡ್ಕವರೆಗೂ ವಾಹನಗಳು ಮುಂದೆ ಚಲಿಸಲಾಗದೆ ಸಾಲಿನಲ್ಲಿ ನಿಂತ ದೃಶ್ಯ ಕಂಡು ಬಂತು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬೇಟಿ ನೀಡಿದ ಟ್ರಾಫಿಕ್ ಎಸ್.ಐ.ಸುತೇಶ್ ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಕರೆಸಿ ನೀರು ಹಾಯಿಸುವ ಮೂಲಕ ತೈಲವನ್ನು ಶುಚಿಗೊಳಿಸುವ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು