8:24 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿ: ತೈಲ ಟ್ಯಾಂಕರ್ ಸ್ಫೋಟ; ರಸ್ತೆಗೆ ಚೆಲ್ಲಿದ ಆಯಿಲ್; ಸಂಚಾರ ಅಸ್ತವ್ಯಸ್ತ

22/12/2023, 18:39

ಬಂಟ್ವಾಳ(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ ಘಟನೆ ನಡೆದಿದೆ. ಇದರಿಂದ ಹೆದ್ದಾರಿಯಲ್ಲಿ ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು.
ಮಂಗಳೂರಿನಿಂದ ಕಲ್ಲಿದ್ದಲನ್ನು ಹೇರಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಲಾರಿ ನರಹರಿ ಪರ್ವತದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆಯಿತು. ಡಿಕ್ಕಿಯಾದ ರಭಸಕ್ಕೆ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಲಾರಿಗಳೆರಡರ ತೈಲ ತುಂಬಿದ ಟ್ಯಾಂಕ್ ಸ್ಫೋಟಗೊಂಡು ತೈಲ ಪೂರ್ತಿ ರಸ್ತೆಯಲ್ಲಿ ಚೆಲ್ಲಿದ್ದು,ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮ ಒಂದು ಬದಿಯಿಂದ ಮೆಲ್ಕಾರ್ ವರೆಗೂ ಇನ್ನೊಂದು ಬದಿಯಿಂದ ಕಲ್ಲಡ್ಕವರೆಗೂ ವಾಹನಗಳು ಮುಂದೆ ಚಲಿಸಲಾಗದೆ ಸಾಲಿನಲ್ಲಿ ನಿಂತ ದೃಶ್ಯ ಕಂಡು ಬಂತು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬೇಟಿ ನೀಡಿದ ಟ್ರಾಫಿಕ್ ಎಸ್.ಐ.ಸುತೇಶ್ ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಕರೆಸಿ ನೀರು ಹಾಯಿಸುವ ಮೂಲಕ ತೈಲವನ್ನು ಶುಚಿಗೊಳಿಸುವ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು