12:00 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Kalladka | ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರವೇಶೋತ್ಸವ: ‘ಆಗತ-ಸ್ವಾಗತ 2025’

15/08/2025, 22:19

ಬಂಟ್ವಾಳ(reporterkarnataka.com): ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ‘ಆಗತ-ಸ್ವಾಗತ 2025’ ಬುಧವಾರ ಆಜಾದ್ ಭವನದಲ್ಲಿ ನಡೆಯಿತು.
ಗಣ್ಯರಿಂದ ದೀಪ ಪ್ರಜ್ವಲನ, ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ, ಬಳಿಕ ಗಣ್ಯ ಅತಿಥಿಗಳು ಅಗ್ನಿಹೋತ್ರಕ್ಕೆ ಹವಿಸ್ಸನ್ನು ಅರ್ಪಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಆರತಿ ಬೆಳಗಿ, ಕುಂಕುಮ ಹಚ್ಚಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಹಿರಿಯರ ಆಶೀರ್ವಾದ ಪಡೆದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಸಂಸ್ಕೃತಿ ಆಧಾರಿತ ಮಹರ್ಷಿ ಶಿಕ್ಷಣದ ಅಗತ್ಯತೆ ಮತ್ತು ಅನಿವಾರ್ಯತೆಯನ್ನು ತಿಳಿಸಿದರು.
ವಿದ್ಯಾ ಕೇಂದ್ರದಲ್ಲಿ ಮಾನವೀಯ ಮೌಲ್ಯಗಳನ್ನೊಳಗೊಂಡ ಶಿಕ್ಷಣ ನೀಡುತ್ತಿರುವುದಾಗಿ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಪಿ. ಎಲ್. ಧರ್ಮ, ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ, ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಪುತ್ತೂರು ಉದ್ಯಮಿ ಬಲರಾಮ ಆಚಾರ್ಯ, ರಾಜಿ ಬಲರಾಮ ಆಚಾರ್ಯ, ಹಾರ್ದಿಕ್ ಹರ್ಬಲ್ಸ್ ಕೆದಿಲದ ಮುರಳೀಧರ, ಮೀರಾ ಮುರಳಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಕುಲಪತಿಗಳಾದ ಡಾ. ಧರ್ಮ ಮಾತನಾಡಿ, ಇಲ್ಲಿನ ಶಿಕ್ಷಣದಿಂದ ಕೌಶಲ್ಯವನ್ನು ಪಡೆಯುವ ಜೊತೆಗೆ ಸಮಾಜದಲ್ಲಿ ಸಹಬಾಳ್ವೆ ನಡೆಸುತ್ತಾ ವಿನಯವಂತಿಕೆಯಿಂದ ಜೀವನ ನಡೆಸಬೇಕು. ಮುಂದೆ ವಿದ್ಯಾಕೇಂದ್ರಕ್ಕೆ ಸ್ಥಿರವಾದ ಸ್ತಂಭದಂತಿದ್ದು ಸಹಕಾರ ನೀಡಿರಿ ಎಂಬುದಾಗಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ರಾಷ್ಟ್ರ ಸೇವಿಕಾ ಸಮಿತಿಯ ದಕ್ಷಿಣ ಪ್ರಾಂತದ ಮಾರ್ಗದರ್ಶಕ ಮಂಡಳಿಯ ಸದಸ್ಯೆ ಡಾ. ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪದವಿ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರಕಟ್ಟೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಮಾಹಿತಿ ಕೈಪಿಡಿ “ಶಿಕ್ಷಣ ದರ್ಶಿನಿ” ಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು. ವಿದ್ಯಾರ್ಥಿನಿಯರಾದ ಧನುಶ್ರೀ ವಂದಿಸಿ, ದಿವ್ಯ ಲಕ್ಷ್ಮೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು