9:23 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ  66ನೇ ಕನ್ನಡ ರಾಜ್ಯೋತ್ಸವ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

02/11/2021, 11:58

ಮಂಗಳೂರು(reporterkarnataka news): ಬಂಟ್ವಾಳ ತಾಲೂಕಿನ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ ಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ  ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು.

ಶಿಕ್ಷಕಿ ಮಾಲಿನಿ ಮಾತನಾಡಿ,ಕರ್ನಾಟಕ ಏಕೀಕರಣ ಹೋರಾಟ ,ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ತಿಳಿಸಿದರು.ಶಾಲಾ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣವನ್ನು ಮಾಡಿದರು.ಕನ್ನಡ ನಾಡುನುಡಿಯನ್ನು ವರ್ಣಿಸುವ ಹಾಡುಗಳನ್ನು ಹಾಡಲಾಯಿತು. ಕನ್ನಡ ರಾಜ್ಯೋತ್ಸವ, ಕರ್ನಾಟಕ ಏಕೀಕರಣ ಹೋರಾಟ, ಕನ್ನಡ ನಾಡು-ನುಡಿಯ ಬಗ್ಗೆ ಸವಿವರವಾಗಿ ಅವರು ಮಕ್ಕಳಿಗೆ ತಿಳಿಸಿದರು.

ಕನ್ನಡ ಭಾಷಾ  ಶಿಕ್ಷಕಿ ಜಯಲಕ್ಷ್ಮಿ ಮಾತನಾಡಿ,ಕನ್ನಡ ಭಾಷೆ ಸಂಸ್ಕೃತಿ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುತ್ತಾ ಕನ್ನಡವನ್ನು ಉಳಿಸುವಲ್ಲಿ ಎಲ್ಲರೂ  ಪ್ರಯತ್ನ ಪಡಬೇಕೆಂದು ತಿಳಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ಕನ್ನಡ  ಶಿಕ್ಷಕಿ ಜಯಲಕ್ಷ್ಮಿ ಎಲ್ಲಾ ಅತಿಥಿಗಳನ್ನು ಕನ್ನಡ ಶಾಲು ಹೊದಿಸುವ ಮೂಲಕ ಸ್ವಾಗತಿಸಿದರು.

ಶಾಲಾ ಶಿಕ್ಷಕರಾದ ಶ್ರೀಯುತ ಪ್ರಭಾಕರ್, ಸಂತೋಷ್ ಕೆ ಪಮ್ಮರ್ , ವಿನಿತ,ಪುಷ್ಪ ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು