1:18 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ರಾಷ್ಟ್ರ ನಿರ್ಮಾತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

26/09/2023, 00:13

ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ಪ್ರದಾನ ಮಾಡಲಾಯಿತು.


ರೋಟರಿ ಕ್ಲಬ್ ದೇರಳಕಟ್ಟೆ ಸಂಸ್ಥೆಯ ಆಶ್ರಯದಲ್ಲಿ ಸೆ.24 ರಂದು ಹೋಟೇಲ್‌ ಕಂಪರ್ಟ್ಇನ್ ಸಭಾಂಗಣದಲ್ಲಿ ಜರಗಿದ “ಶಿಕ್ಷಕರ ದಿನಾ ಚರಣೆ” ಯ ಸಮಾರಂಭದಲ್ಲಿ ರೋಟರಿ ಸಂಸ್ಥೆಯ ವೃತ್ತಿಪರ ಸೇವೆಯ ಅಂಗವಾಗಿ ಹಾಗೂ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರು ಸಲ್ಲಿಸಿದ ಅನುಪಮ ಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ| ಕೆ.ರವೀಂದ್ರ ಶೆಟ್ಟಿ, ಮಾಜಿ ಗವರ್ನರ್ ಡಾ ದೇವದಾಸ್ ರೈ, ಸಹಾಯಕ ಗವರ್ನರ್‌ರಾರದ ಪಿ.ಡಿ. ಶೆಟ್ಟಿಯವರು,.ಸಂಸ್ಥೆಯ ಅಧ್ಯಕ್ಷೆ ಲತಾ ವಿಕ್ರಮ್, ಕಾರ್ಯದರ್ಶಿ ಸುಜಾತ ಶೆಟ್ಟಿಯವರು, ಚುನಾಯಿತ ಗವರ್ನರ್‌ ವಿಕ್ರಮ್‌ದತ್ತ ಹಾಗೂ ಮಾಜಿ ಅಧ್ಯಕ್ಷರಾದ| ಜೆ.ಪಿ.ರೈಯವರು, ಡಾ l ಅನಂತನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು