1:12 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು

03/01/2025, 15:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.
ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡು ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಅರಿತಿದ್ದ ಹರ್ಷ ಜನವರಿ 1ರ ಮಧ್ಯರಾತ್ರಿ ಮನೆಗೆ ನುಗ್ಗಿದ್ದಾನೆ.
ಶಬ್ದವಾದ ಹಿನ್ನಲೆ ಮಂಗಳಾ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.


ಯುವಕನನ್ನ ಹಿಡಿದಾಗ ಮಂಗಳಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.
ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನು ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.
ಬಳಿಕ ಮಂಗಳಾ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು