4:53 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು

03/01/2025, 15:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.
ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡು ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಅರಿತಿದ್ದ ಹರ್ಷ ಜನವರಿ 1ರ ಮಧ್ಯರಾತ್ರಿ ಮನೆಗೆ ನುಗ್ಗಿದ್ದಾನೆ.
ಶಬ್ದವಾದ ಹಿನ್ನಲೆ ಮಂಗಳಾ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.


ಯುವಕನನ್ನ ಹಿಡಿದಾಗ ಮಂಗಳಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.
ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನು ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.
ಬಳಿಕ ಮಂಗಳಾ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು