1:26 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು

03/01/2025, 15:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.
ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡು ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಅರಿತಿದ್ದ ಹರ್ಷ ಜನವರಿ 1ರ ಮಧ್ಯರಾತ್ರಿ ಮನೆಗೆ ನುಗ್ಗಿದ್ದಾನೆ.
ಶಬ್ದವಾದ ಹಿನ್ನಲೆ ಮಂಗಳಾ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.


ಯುವಕನನ್ನ ಹಿಡಿದಾಗ ಮಂಗಳಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.
ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನು ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.
ಬಳಿಕ ಮಂಗಳಾ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು