9:48 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮ: ಧಾರ್ಮಿಕ ಸಭಾ ಕಾರ್ಯಕ್ರಮ

24/02/2024, 19:44

ಬಂಟ್ವಾಳ(reporterkarnataka.com): ರಾಮ ನಾಮ ತಾರಕ ಮಂತ್ರ ಮಂದಿರದಲ್ಲಿ ಮಾತ್ರವಲ್ಲ, ಮನೆಮನೆಗಳಲ್ಲಿ ನಿರಂತರವಾಗಿ ನಡೆಯಬೇಕು. ರಾಮ ನಾಮದ ಬಲದಿಂದ ಬೇಡನಾಗಿದ್ದ ರತ್ನಾಕರ ವಾಲ್ಮೀಕಿಯಾದಂತೆ ಭವ ಸಾಗರವನ್ನು ದಾಟಲು ರಾಮಮಂತ್ರ ಪ್ರೇರಕವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠ ಹೊಸನಗರದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.


ಅವರು ಕಲ್ಲಡ್ಕ ಶ್ರೀ ರಾಮ ಮಂದಿರದ ಶತಾಬ್ದಿ ಸಂಭ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಗ್ರಾಮ ಸಮ್ಮಾನ್ ಕಾರ್ಯಕ್ರಮದಲ್ಲಿ ಶನಿವಾರ ರಾಮಾಂಗಣದಲ್ಲಿ ಆಶೀರ್ಚನ ನೀಡಿದರು‌.
ಭಕ್ತರು ಇರುವಲ್ಲಿ ಭಗವಂತನಿರುತ್ತಾನೆ. ಕಲ್ಲಾಗಿ ಶಾಪಗ್ರಸ್ತ ಳಾಗಿದ್ದ ಅಹಲ್ಯೆಯಂತಿದ್ದ ಕಲ್ಲಡ್ಕ, ರಾಮಮಂದಿರ ನಿರ್ಮಾಣವಾದ ಬಳಿಕ ಶಾಪ ವಿಮೋಚನೆಯಾಗಿ ಪಾವನಗೊಂಡಿದೆ. ಡಾ.ಪ್ರಭಾಕರ ಭಟ್ಟರು ಸ್ವಂತಕ್ಕೆ ಒತ್ತು ನೀಡದೆ ಪ್ರಭಾಕರ ರಾಮನಂತೆ ದೊಡ್ಡ ವ್ಯಕ್ತಿಯಾಗಿದ್ದಾರೆ. ಅವರು ಓರ್ವ ವ್ಯಕ್ತಿಯಲ್ಲ. ಸಂಸ್ಥೆ ಯಾಗಿ ಬೆಳೆದಿದ್ದಾರೆ . ಕಲ್ಕಡ್ಕದಲ್ಲಿ ರಾಮಪೂಜನ ಮಾತ್ರವಲ್ಲ ಗ್ರಾಮ ಪೂಜೆ ನಡೆದಿದೆ. ಅಯೋಧ್ಯೆಯ ರಾಮ ಮಂದಿರದಂತೆ ಕಲ್ಲಡ್ಕದ ರಾಮ ಮಂದಿರವು ಬೆಳಗುತ್ತಿರಲಿ ಎಂದು ಸಂತಸ ವ್ಯಕ್ತಪಡಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 30 ಮಂದಿಯನ್ನು ಗ್ರಾಮ ಸಮ್ಮಾನ್ ಮಾಡಿ ಆಶೀರ್ವದಿಸಿ ಹರಸಿದರು.
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರಿನ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಮಾತನಾಡಿ, ಹನುಮನ ಶಕ್ತಿ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನೆಲೆಯಾಗಿ ನಿಂತು ದುಷ್ಟಶಕ್ತಿಗಳ ಉಪಟಳ ಕಡಿಮೆಯಾಗಿದೆ. ಜಗತ್ತಿನ ಶಾಂತಿಗಾಗಿ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಯ ಕಾರ್ಯ ನಿರಂತರ ನಡೆಯಬೇಕು.ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಕೊಳ್ಳಬೇಕು ಎಂದರು.
ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮಂದಿರದ ಕಾರ್ಯಚಟುವಟಿಕೆಗಳ ಶತಮಾನದ ಇತಿಹಾಸವನ್ನು ತಿಳಿಸಿದರು.
ಬೆಳಿಗ್ಗೆ ಶ್ರೀ ರಾಮ ವಿದ್ಯಾಕೇಂದ್ರದ ವಿದ್ಯಾರ್ಥಿ ಗಳಿಂದ ಭಜನೆ, ಕಶೆಕೋಡಿ ಸೂರ್ಯನಾರಾಯಣ ಭಟ್ ಪೌರೋಹಿತ್ಯದಲ್ಲಿ ರಾಮನಾಮ ತಾರಕ ಜಪಯಜ್ಞ ನಡೆಯಿತು. ಮಹಾಮಂಗಳಾರತಿ ಬಳಿಕ ಅನ್ನಸಂತರ್ಪಣೆ, ಶ್ರೀ ಕೋದಂಡರಾಮ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದಿಂದ ಶ್ರೀ ರಾಮ ಪಟ್ಟಾಭಿಷೇಕ ಯಕ್ಷಗಾನ ಬಯಲಾಟ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು