4:57 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ: ಭಕ್ತರೋ? ಅಥವಾ ಕಿಡಿಗೇಡಿಗಳ ಕೆಲಸವೋ?

04/08/2023, 15:59

ಚಿಕ್ಕಮಗಳೂರು(reporterkarnataka.com): ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ. ಇದು ಭಕ್ತರ ಕೆಲಸವೋ? ಕಿಡಿಗೇಡಿ ಕೃತ್ಯವೋ ಎನ್ನುವುದು ಗೊತ್ತಾಗಿಲ್ಲ.

ಹುಂಡಿಗೆ ಜೆರಾಕ್ಸ್ ನೋಟ್ ಹಾಕಿ ಯಾರೋ ಭಕ್ತರು ಇಷ್ಟಾರ್ಥ ಸಾಧನೆಗೆ ಬೇಡಿಕೊಂಡಿರಬೇಕು. ಇಲ್ಲವೇ ಕಿಡಿಗೇಡಿಗಳು ತಮಾಷೆಗೆ ಮಾಡಿರಬಹುದು ಎನ್ನಲಾಗಿದೆ.
ಕಾಣಿಕೆ ಹುಂಡಿಯಲ್ಲಿ 2000 ಮುಖ ಬೆಲೆಯ ಕಲರ್ ಜೆರಾಕ್ಸ್ ನೋಟು ಪತ್ತೆಯಾಗಿದೆ.
ಕಲರ್ ಜೆರಾಕ್ಸ್ ನೋಟು ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದೆ. ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆಯಾಗಿದೆ.
ಬಳಿಕ ಜೆರಾಕ್ಸ್ ನೋಟ್ ನ್ನು ಆಡಳಿತ ಮಂಡಳಿ ಹರಿದು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು