12:49 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಾಲುವೆಯ ಕೆನಲ್ ಬಿರುಕು ಬಿಟ್ಟು ಕೊಚ್ಚಿ ಹೋದ ಹೊಲದ ಮಣ್ಣು; ಒಂದೂವರೆ ವರ್ಷದ ಹಳೆ ಸಮಸ್ಯೆಗೆ ಕೊನೆಗೂ ಪರಿಹಾರ

30/07/2021, 08:02

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು 

info.reporterkarnataka@gmail.com

ಜಿಲ್ಲೆಯ ದೇವದುರ್ಗ ತಾಲೂಕಿನ ಬೇವಿನಬೆಂಚಿ ಗ್ರಾಮದ ಹನುಮಂತ ಎಂಬವರ ಹೊಲದ ಸಮೀಪವಿರುವ ನಾರಾಯಣಪುರ ಬಲದಂಡೆಯ ಕಾಲುವೆಯ ಕಳಪೆ ಕಾಮಗಾರಿಯಿಂದ ಕೆನಲ್ ಒಡೆದು ಹೋದ ಪರಿಣಾಮ ಮಣ್ಣು ಕೊಚ್ಚಿ ಹೋಗಿ ಬೆಳೆಗೆ ತೊಂದರೆ ಉಂಟಾಗಿದ್ದು, ಸುಮಾರು ಒಂದೂವರೆ ವರ್ಷ ಹಳೆಯದಾದ ಈ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕಿದೆ.

ಹನುಮಂತ ಅವರಿಗೆ 3.02 ಎಕರೆ ಜಮೀನು ಇದ್ದು, ಆವರ ಹೊಲದ ಪಕ್ಕದಲ್ಲೇ ನಾರಾಯಣಪುರ ಬಲದಂಡೆ ಕಾಲುವೆಯ ವಿತರಣೆ ಕಾಲುವೆ ಹಾದು ಹೋಗುತ್ತದೆ ಇದರ ಕಳಪೆ ಕಾಮಗಾರಿಯಿಂದಾಗಿ ಸಂಕಷ್ಟ ಎದುರಾಗಿತ್ತು.

ಮಣ್ಣು ಕೊಚ್ಚಿ ಹೋಗಿರುವುದರಿಂದ ಹೊಲ ಬಿತ್ತನೆಗೆ ಬಾರದೆ ಸ್ಥಿತಿಯಲ್ಲಿತ್ತು. ಹನುಮಂತ ಅವರು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮೊರೆ ಹೋಗಿ ತನ್ನ. ದುಸ್ಥಿತಿಯನ್ನು ಹೇಳಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಈ ಹಿನ್ನೆಲೆಯಲ್ಲಿ ಹನುಮಂತ ಅವರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮೊರೆ ಹೋಗಿದ್ದರು. ಸಂಘಟನೆ ತನ್ನ ಲೆಟರ್ ಹೆಡ್ ಮೂಲಕ ಮನವಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು

ಯಾವುದೇ ರೀತಿಯ ಸ್ಪಂದನೆ ಕೊಡದೆ ಬೇಜವಾಬ್ದಾರಿತನ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ರೈತ ಸಂಘದ

ರಾಜ್ಯದ ಗೌರವಾಧ್ಯಕ್ಷ ಶಶಿಕಾಂತ್ ಪಡಸಲಗಿ ಮತ್ತು ಇಂಚಿಗೇರಿ ಮಠದ ಗುರುಗಳು ರಾಯಚೂರಿಗೆ ಆಗಮಿಸಿ ಸುಮಾರು ಒಂದೂವರೆ ವರ್ಷ ಕಳೆದರೂ ಕಾರ್ಯರೂಪಕ್ಕೆ ಬಾರದೇ ಕಾಮಗಾರಿಯನ್ನು 


ದೇವದುರ್ಗ ಪಿಡಬ್ಲ್ಯೂಡಿ ಮೂಲಕ ನೆರವೇರಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಟ್ಟರು. ಅಲ್ಲಿನ ನೀರಾವರಿ ಅಧಿಕಾರಿಗಳಿಗೆ ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡದೆ ಇದ್ದರೆ ಇನ್ನು ಮುಂದೆ ನಿಮಗೆ ಉಳಿಗಾಲವಿಲ್ಲವೆಂದು ಎಚ್ಚರಿಸಿದರು. ತಕ್ಷಣ ಸ್ಪಂದಿಸಿದ ಅಧಿಕಾರಿಗಳು ತಪ್ಪಾಗಿದೆ ಗುರುಗಳೆ ಇನ್ನು ಮುಂದೆ ಕಾರ್ಯನಿರ್ವಹಣೆಯಲ್ಲಿ ಪ್ರಾಮಾಣಿಕತೆಯನ್ನು ಮರೆಯುತ್ತೇವೆ ಎಂದು ಒಪ್ಪಿಕೊಂಡು 15 ದಿವಸದೊಳಗೆ ಕೆಲಸವನ್ನು ಮುಗಿಸಿಕೊಳ್ಳಲು ತೀರ್ಮಾನಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು