8:25 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ

04/04/2023, 20:37

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕೈ ಜೋಡಿಸುತ್ತದೆ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ಅವರು ಅಥಣಿ ಪಟ್ಟಣದ ಐಬಿ ರಸ್ತೆಗೆ ಹೊಂದಿಕೊಂಡು ಹಮ್ಮಿಕೊಂಡ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಎಲ್ಲೆಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬಹುದು ಅಲ್ಲಲ್ಲಿ ನಾನೇ ಖುದ್ದಾಗಿ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಇದೀಗ ಸುಮಾರು 30 ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ನಾವು ಸುಮಾರು 25 ಕ್ಷೇತ್ರಗಳನ್ನು ಗೆಲ್ಲಬಹುದು. ಅನಂತರ‌ ಬಹುಮತ ಬರದೇ ಇದ್ದಾಗ ನಮ್ಮ ವಿಚಾರಕ್ಕೆ ಸ್ಪಂದಿಸುವ ಯಾವ ಪಕ್ಷವಾದರೂ ಸರಿ, ಅದು ಕಾಂಗ್ರೇಸ್, ಬಿಜೆಪಿ ಯಾದರೂ ಸರಿ‌‌ ನಾವು ಕೈಜೋಡಿಸುತ್ತೆವೆ ಎಂದರು.
ನನ್ನ ಮೇಲೆ ವಿಶ್ವಾಸವಿಟ್ಟು ದಲಿತರು, ಹಿಂದುಗಳು, ಮುಸ್ಲಿಮರು ಸೇರಿದಂತೆ ಅನೇಕರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರೆಲ್ಲ ವಿಶ್ವಾಸ ಉಳಿಸಿಕೊಳ್ಳುವುದು ನನ್ನ ಕರ್ತವ್ಯ ಅಷ್ಟೆ, ಆದರೆ‌ ನಮ್ಮದು ಕಾಂಗ್ರೇಸ್ಸಿನ ಬಿ‌ ಟೀಮ್ ಅಥವಾ ಬಿಜೆಪಿಯ ಬೀ ಟೀಮ್ ಅಲ್ಲ, ಅದು ಮಾತನಾಡುವವರ ಕಲ್ಪನೆಗೆ ಬಿಟ್ಟಿದ್ದು. ಒಟ್ಟಿನಲ್ಲಿ ಜನಪರ ಆಡಳಿತ ನೀಡುವುದು ನನ್ನ ಗುರಿ ಮತ್ತು ಅಥಣಿಯಲ್ಲಿ‌ ನಮ್ಮ ಅಭ್ಯರ್ಥಿ ಬಸವರಾಜ ಬೀಸನಕೊಪ್ಪ ಅವರ ಗೆಲುವು ಪಕ್ಕಾ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು