1:32 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ

04/04/2023, 20:37

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕೈ ಜೋಡಿಸುತ್ತದೆ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ಅವರು ಅಥಣಿ ಪಟ್ಟಣದ ಐಬಿ ರಸ್ತೆಗೆ ಹೊಂದಿಕೊಂಡು ಹಮ್ಮಿಕೊಂಡ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಎಲ್ಲೆಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬಹುದು ಅಲ್ಲಲ್ಲಿ ನಾನೇ ಖುದ್ದಾಗಿ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಇದೀಗ ಸುಮಾರು 30 ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ನಾವು ಸುಮಾರು 25 ಕ್ಷೇತ್ರಗಳನ್ನು ಗೆಲ್ಲಬಹುದು. ಅನಂತರ‌ ಬಹುಮತ ಬರದೇ ಇದ್ದಾಗ ನಮ್ಮ ವಿಚಾರಕ್ಕೆ ಸ್ಪಂದಿಸುವ ಯಾವ ಪಕ್ಷವಾದರೂ ಸರಿ, ಅದು ಕಾಂಗ್ರೇಸ್, ಬಿಜೆಪಿ ಯಾದರೂ ಸರಿ‌‌ ನಾವು ಕೈಜೋಡಿಸುತ್ತೆವೆ ಎಂದರು.
ನನ್ನ ಮೇಲೆ ವಿಶ್ವಾಸವಿಟ್ಟು ದಲಿತರು, ಹಿಂದುಗಳು, ಮುಸ್ಲಿಮರು ಸೇರಿದಂತೆ ಅನೇಕರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರೆಲ್ಲ ವಿಶ್ವಾಸ ಉಳಿಸಿಕೊಳ್ಳುವುದು ನನ್ನ ಕರ್ತವ್ಯ ಅಷ್ಟೆ, ಆದರೆ‌ ನಮ್ಮದು ಕಾಂಗ್ರೇಸ್ಸಿನ ಬಿ‌ ಟೀಮ್ ಅಥವಾ ಬಿಜೆಪಿಯ ಬೀ ಟೀಮ್ ಅಲ್ಲ, ಅದು ಮಾತನಾಡುವವರ ಕಲ್ಪನೆಗೆ ಬಿಟ್ಟಿದ್ದು. ಒಟ್ಟಿನಲ್ಲಿ ಜನಪರ ಆಡಳಿತ ನೀಡುವುದು ನನ್ನ ಗುರಿ ಮತ್ತು ಅಥಣಿಯಲ್ಲಿ‌ ನಮ್ಮ ಅಭ್ಯರ್ಥಿ ಬಸವರಾಜ ಬೀಸನಕೊಪ್ಪ ಅವರ ಗೆಲುವು ಪಕ್ಕಾ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು