3:33 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ

08/08/2021, 17:59

Photo source : BeautyOfTulunad
ಮಂಗಳೂರು (ReporterKarnataka.com)

ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ‌ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿತ. ಕಳೆದ 47 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಕೃಷಿಭೂಮಿ ಹೊಂದಿದ್ದು, ಬಾಲ್ಯದಿಂದಲೇ ಕಂಬಳದ ಆಸಕ್ತಿ ಹೊಂದಿದ್ದರು, ತನ್ನ ಗದ್ದೆ ಉಳಲೆಂದು ಉತ್ತಮ ಜಾತಿಯ ಕೋಣಗಳನ್ನು ತಂದು, ಕೃಷಿ ಕೆಲಸ ಮುಗಿದ ಬಳಿಕ ಕಂಬಳ ಗದ್ದೆಗಳಲ್ಲಿ ಓಡಿಸಿ ಖುಷಿ ಪಡೆಯುತ್ತಿದ್ದರು. ಮುಂದೆ, ದೂರದ ಊರುಗಳಲ್ಲಿ ನಡೆಯುವ ಕಂಬಳಗಳತ್ತ ಗಮನ ಕೇಂದ್ರೀಕರಿಸಿದ ಇವರು ಕಂಬಳಕ್ಕಾಗಿಯೇ ಹುಬ್ಬಳ್ಳಿ, ಕೋಟಾ ಮೊದಲಾದ ಕಡೆಯಿಂದ ಉತ್ತಮ ಜಾತಿಯ ಕೋಣಗಳನ್ನು ತಂದು, ಪಳಗಿಸುವುದರಲ್ಲಿ ಎತ್ತಿದ ಕೈ. ಇವರು ಹಿರಿಕಿರಿಯ ಕಂಬಳಾಸಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರಥಮ ಬಾರಿಗೆ ಬಾರಾಡಿ ಕಂಬಳದಲ್ಲಿ ಗುರುತಿಸಲ್ಪಟ್ಟಿದ್ದ ಇವರು ಇದಕ್ಕಿಂತ ಮುಂಚೆ ಪೂಕರೆ ಕಂಬಳಗಳಲ್ಲಿ ಪಾಲ್ಗೊಂಡಿದ್ದರು. ಆರಂಭದ ದಿನಗಳಲ್ಲಿ ಕೋಣ ಓಡಿಸಿದ್ದರು. ಬಳಿಕ ಜೋಡಿ ಕೋಣ ಸಾಕಿ, ಅವುಗಳನ್ನು ಕಂಬಳಕ್ಕೆ ಕೊಂಡೊಯ್ಯುವ ಗೀಳು ಬೆಳೆಸಿಕೊಂಡಿದ್ದರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಉಡುಪಿ ಜಿಲ್ಲೆಯಲ್ಲಿ ನಡೆಯುವ ಎಲ್ಲ ಕಂಬಳಗಳಲ್ಲಿ ಕೋಣ ಇಳಿಸಿದ ಇವರಿಗೆ ಬಹುತೇಕ ಕಡೆಗಳಲ್ಲಿ ಮೆಡಲ್ ಸಿಕ್ಕಿದೆ. ಕದ್ರಿ, ಮೂಲ್ಕಿ, ಮಿಜಾರು, ಬಜಗೋಳಿ, ಪುತ್ತೂರು, ಕಾವಳಕಟ್ಟೆ-ಮೂಡೂರು ಪಡು, ಉಪ್ಪಿನಂಗಡಿ, ಜೆಪ್ಪು, ಕಟಪಾಡಿ, ಮೂಡಬಿದ್ರೆ, ವೇಣೂರು, ಕಾಜೂರು, ಬೋಳಿಯಾರು, ಪಡುಬಿದ್ರಿ, ಐಕಳ ಬಾವ, ತಿರುವೈಲು, ಬೊಳ್ಳೂರು (ಗುರುಪುರ), ಸುರತ್ಕಲ್, ಪಿಲಿಕುಲ, ಹೊಸಬೆಟ್ಟು ಹೀಗೆ ಎಲ್ಲೆಲ್ಲಿ ಕಂಬಳ ನಡೆಯುತ್ತಿದೆಯೋ ಅಲ್ಲಿ ಕೆದುಬರಿ ಗುರುವಪ್ಪನವರ ಕೋಣಗಳು ಹಾಜರಾಗುತ್ತಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು