4:40 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ

08/08/2021, 17:59

Photo source : BeautyOfTulunad
ಮಂಗಳೂರು (ReporterKarnataka.com)

ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ‌ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿತ. ಕಳೆದ 47 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಕೃಷಿಭೂಮಿ ಹೊಂದಿದ್ದು, ಬಾಲ್ಯದಿಂದಲೇ ಕಂಬಳದ ಆಸಕ್ತಿ ಹೊಂದಿದ್ದರು, ತನ್ನ ಗದ್ದೆ ಉಳಲೆಂದು ಉತ್ತಮ ಜಾತಿಯ ಕೋಣಗಳನ್ನು ತಂದು, ಕೃಷಿ ಕೆಲಸ ಮುಗಿದ ಬಳಿಕ ಕಂಬಳ ಗದ್ದೆಗಳಲ್ಲಿ ಓಡಿಸಿ ಖುಷಿ ಪಡೆಯುತ್ತಿದ್ದರು. ಮುಂದೆ, ದೂರದ ಊರುಗಳಲ್ಲಿ ನಡೆಯುವ ಕಂಬಳಗಳತ್ತ ಗಮನ ಕೇಂದ್ರೀಕರಿಸಿದ ಇವರು ಕಂಬಳಕ್ಕಾಗಿಯೇ ಹುಬ್ಬಳ್ಳಿ, ಕೋಟಾ ಮೊದಲಾದ ಕಡೆಯಿಂದ ಉತ್ತಮ ಜಾತಿಯ ಕೋಣಗಳನ್ನು ತಂದು, ಪಳಗಿಸುವುದರಲ್ಲಿ ಎತ್ತಿದ ಕೈ. ಇವರು ಹಿರಿಕಿರಿಯ ಕಂಬಳಾಸಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರಥಮ ಬಾರಿಗೆ ಬಾರಾಡಿ ಕಂಬಳದಲ್ಲಿ ಗುರುತಿಸಲ್ಪಟ್ಟಿದ್ದ ಇವರು ಇದಕ್ಕಿಂತ ಮುಂಚೆ ಪೂಕರೆ ಕಂಬಳಗಳಲ್ಲಿ ಪಾಲ್ಗೊಂಡಿದ್ದರು. ಆರಂಭದ ದಿನಗಳಲ್ಲಿ ಕೋಣ ಓಡಿಸಿದ್ದರು. ಬಳಿಕ ಜೋಡಿ ಕೋಣ ಸಾಕಿ, ಅವುಗಳನ್ನು ಕಂಬಳಕ್ಕೆ ಕೊಂಡೊಯ್ಯುವ ಗೀಳು ಬೆಳೆಸಿಕೊಂಡಿದ್ದರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಉಡುಪಿ ಜಿಲ್ಲೆಯಲ್ಲಿ ನಡೆಯುವ ಎಲ್ಲ ಕಂಬಳಗಳಲ್ಲಿ ಕೋಣ ಇಳಿಸಿದ ಇವರಿಗೆ ಬಹುತೇಕ ಕಡೆಗಳಲ್ಲಿ ಮೆಡಲ್ ಸಿಕ್ಕಿದೆ. ಕದ್ರಿ, ಮೂಲ್ಕಿ, ಮಿಜಾರು, ಬಜಗೋಳಿ, ಪುತ್ತೂರು, ಕಾವಳಕಟ್ಟೆ-ಮೂಡೂರು ಪಡು, ಉಪ್ಪಿನಂಗಡಿ, ಜೆಪ್ಪು, ಕಟಪಾಡಿ, ಮೂಡಬಿದ್ರೆ, ವೇಣೂರು, ಕಾಜೂರು, ಬೋಳಿಯಾರು, ಪಡುಬಿದ್ರಿ, ಐಕಳ ಬಾವ, ತಿರುವೈಲು, ಬೊಳ್ಳೂರು (ಗುರುಪುರ), ಸುರತ್ಕಲ್, ಪಿಲಿಕುಲ, ಹೊಸಬೆಟ್ಟು ಹೀಗೆ ಎಲ್ಲೆಲ್ಲಿ ಕಂಬಳ ನಡೆಯುತ್ತಿದೆಯೋ ಅಲ್ಲಿ ಕೆದುಬರಿ ಗುರುವಪ್ಪನವರ ಕೋಣಗಳು ಹಾಜರಾಗುತ್ತಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು