7:18 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಕಂಬಳ ಕ್ಷೇತ್ರದ ಉಸೇನ್ ಬೋಲ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು: ಯಾಕೆ? ಏನು ಕಾರಣ? ಮುಂದಕ್ಕೆ ಓದಿ

20/07/2022, 12:00

ಮಂಗಳೂರು(reporterkarnataka.com): ಕಂಬಳ ಕ್ಷೇತ್ರದ  ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕೇಸು ದಾಖಲಾಗಿದೆ. ಅದೂ ಕೂಡ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ಬುಕ್ ಆಗಿದೆ. ಹಾಗಾದರೆ, ಇದು ಏನು ಪ್ರಕರಣ ನೋಡೋಣ ಬನ್ನಿ..

ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿಯ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ಧವೂ ಕ್ರಿಮಿನಲ್ ದೂರು ನೀಡಲಾಗಿದೆ.

ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸೈವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ನೀಡಲಾಗಿದೆ ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಹೇಳಲಾಗಿದೆ.

2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್ ನಲ್ಲಿ ಶ್ರೀನಿವಾಸ ಗೌಡ ಕ್ರಮಿಸಿದ್ದರು.

2009ರಲ್ಲಿ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್‌ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು. ರಾಜ್ಯ ಸರ್ಕಾರ ಸೇರಿ ದೇಶದ ಹಲವು ಸಂಸ್ಥೆಗಳು ಶ್ರೀನಿವಾಸ ಗೌಡಗೆ ನೆರವು ನೀಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು