12:07 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಕಂಬಿ ಹಿಂದೆ ಕಣ್ಣೀರು!: ಜೈಲಿನಿಂದ ಹೊರ ಬಂದ ಬಳಿಕ ಅನಾಥಾಶ್ರಮ ಕಟ್ಟುತ್ತಾರಂತೆ ಪಿಎಸ್‌ಐ ಹಗರಣದ ದಿವ್ಯಾ ಹಾಗರಗಿ!!

12/05/2022, 13:06

ಕಲಬುರಗಿ(reporterkarnataka.com): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ, ಆಡಳಿತ ಪಕ್ಷ ಬಿಜೆಪಿಯನ್ನು ಪೇಚಿಗೆ ಸಿಲುಕಿಸಿದ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ತಾನು ಮಾಡಿದ ಮಹಾ ಅಪರಾಧಕ್ಕೆ ನೊಂದು ಪ್ರತಿ ದಿನವೂ ಕಣ್ಣೀರು ಹಾಕುತ್ತಿದ್ದಾರೆ. ‘ಹಣದ ಹಿಂದೆ ಬಿದ್ದು ನಾನು ನನ್ನ ಲೈಫ್ ಹಾಳುಮಾಡಿಕೊಂಡೆ ಸರ್. ಜೈಲಿನಿಂದ ಹೊರಗೆ ಬಂದ ಬಳಿಕ ಅನಾಥಾಶ್ರಮ ಕಟ್ಟಿ ಜನರ ಸೇವೆ ಮಾಡುತ್ತೇನೆ’ ಎಂದು ಸಿಐಡಿ ಅಧಿಕಾರಿಗಳ ಮುಂದೆ ದಿವ್ಯಾ ಹೇಳಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಲಕ್ಷ ಲಕ್ಷ ಹಣ ಬರುತ್ತೆ ಎಂದು ಇಂತಹ ತಪ್ಪು ಕೆಲಸ ಮಾಡಿದೆ. ನಾನು ಮಾಡಿದ್ದು ದೊಡ್ಡ ತಪ್ಪು. ಅದಕ್ಕಾಗಿ ನನಗೆ ಬಹಳ ಪಶ್ಚಾತಾಪ ಇದೆ.

ಪ್ರಾಮಾಣಿಕರ ಭವಿಷ್ಯ ಹಾಳು ಮಾಡಿ ಬಿಟ್ಟೇ.ದಯವಿಟ್ಟು ಕ್ಷಮಿಸಿ ಬಿಡಿ ಸರ್ ಎಂದು ಸಿಐಡಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ಆರೋಪಿಗಳಾಗಿರುವ ಮಂಜುನಾಥ್ ಮತ್ತು ಕಾಶೀನಾಥ್ ಮಾತು ಕೇಳಿ ನನ್ನ ಜೀವನ ಹಾಳು ಮಾಡಿಕೊಂಡೆ. ನಾನು ಬುದ್ಧಿ ಕಲಿಯಲು ಸಿಐಡಿ ಬಂಧನವೊಂದೇ ಸಾಕು ಎಂದು ತನಿಖಾಧಿಕಾರಿ ಮುಂದೆ ಕಣ್ಣೀರು ಸುರಿಸುತ್ತಾ ದಿವ್ಯಾ ಹೇಳಿಕೆ ನೀಡಿದ್ದಾರಂತೆ.

ಪ್ರತಿನಿತ್ಯ ಕಷ್ಟ ಅಂತ ಜನರು ಬಂದ್ರೆ ಸಹಾಯ ಮಾಡುತ್ತಿದೆ. ಆದರೆ ಈಗ ನನ್ನ ಪರಿಸ್ಥಿತಿ ಈ ರೀತಿಯಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅನಾಥಾಶ್ರಮ ಕಟ್ಟುತ್ತೇನೆ. ಅನಾಥಾಶ್ರಮವನ್ನು ಇದೇ ಸಿಐಡಿ ಅಧಿಕಾರಿಗಳ ಕೈಯಲ್ಲೇ ಉದ್ಘಾಟನೆ ಮಾಡಿಸುತ್ತೇನೆ. ನನ್ನ ಬಂಧಿಸಿ ನನ್ನ
ಮನಃ ಪರಿವರ್ತನೆಗೆ ಸಹಕಾರ ನೀಡಿದ ಸಿಐಡಿ ಅಧಿಕಾರಿಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರಂತೆ.

ಈ ಅವಮಾನ ಎಲ್ಲವೂ ಸಾಕು. ನಾನು ಮುಂದಿನ ದಿನಗಳಲ್ಲಿ ಒಳ್ಳೆಯವಳಾಗಿ ಬಾಳುತ್ತೇನೆ. ಮತ್ತೆ ಅನಾಥಾಶ್ರಮ ಕಟ್ಟಿ ಜನಸೇವೆ
ಮಾಡುತ್ತೇನೆ ಎನ್ನುವುದು ದಿವ್ಯಾ ಅವರ ನುಡಿ ದಿವ್ಯಾ ಹಾಗರಗಿ ಅವರ ಸಿಐಡಿ ಕಸ್ಟಡಿ ಅಂತ್ಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು
ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ನಡುವೆ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಆರೋಪದ ಮೇಲೆ


ಬಂಧಿತರಾಗಿರುವ ದಿವ್ಯಾ ಹಾಗರಗಿ ಅವರ ಪತಿ ರಾಜೇಶ್ ಅವರೂ ಕೂಡ
ಇದೇ ಜೈಲಿನಲ್ಲಿದ್ದಾರೆ. ಈ ವೇಳೆ ಜೈಲಿನಲ್ಲಿ ದಂಪತಿ ಮುಖಾಮುಖಿಯಾಗಿದ್ದಾರೆ. ಇಬ್ಬರೂ ಪರಸ್ಪರ ನೋಡಿಕೊಂಡು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಕೆಟ್ಟ ಮೇಲೆ ಬುದ್ಧಿ ಅಂತ ಹೇಳುವುದು ಇದಕ್ಕೆ ತಾನೆ?

ಇತ್ತೀಚಿನ ಸುದ್ದಿ

ಜಾಹೀರಾತು