7:53 PM Friday4 - July 2025
ಬ್ರೇಕಿಂಗ್ ನ್ಯೂಸ್
Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ…

ಇತ್ತೀಚಿನ ಸುದ್ದಿ

ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬ್ರಾವೊ ದಾಖಲೆ ಪ್ರದಾನ

15/01/2024, 15:39

ಹೊಸದಿಲ್ಲಿ(reporterkarnataka.com): ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸವರು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.
ಮೋಹನ್ ಕುಮಾರ್ ದಾನಪ್ಪರವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24 ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ “ಸಲಾಂ ಸೋಲ್ಮರ್ಸ್” ಶೀರ್ಷಿಕೆಯಡಿಯಲ್ಲಿ ” ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ 42 ಕಿಲೋ ಮೀಟರ್ ನಷ್ಟು ಉದ್ದದಷ್ಟು ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದರು!
ಇವರ ಸಾಧನೆಯು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ಸೇರಲಾಗಿದೆ!

ಇತ್ತೀಚಿನ ಸುದ್ದಿ

ಜಾಹೀರಾತು