8:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬ್ರಾವೊ ದಾಖಲೆ ಪ್ರದಾನ

15/01/2024, 15:39

ಹೊಸದಿಲ್ಲಿ(reporterkarnataka.com): ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸವರು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.
ಮೋಹನ್ ಕುಮಾರ್ ದಾನಪ್ಪರವರು 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24 ನೇ ಕಾರ್ಗಿಲ್‌ ವಿಜಯ ದಿವಸ ಅಂಗವಾಗಿ ಆಗಸ್ಟ್ 15, 2023 ರಂದು ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಗರದಲ್ಲಿ “ಸಲಾಂ ಸೋಲ್ಮರ್ಸ್” ಶೀರ್ಷಿಕೆಯಡಿಯಲ್ಲಿ ” ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ವಾಕ್ಯದಡಿಯಲ್ಲಿ ಯುವಕರು ದೇಶ ಸೇವೆಗೆ ಸೇರುವ ಬಗ್ಗೆ ಜಾಗೃತಿಗಾಗಿ ಕಾರ್ಗಿಲ್ ನಗರದಿಂದ ಕಾರ್ಗಿಲ್‌ ಯುದ್ಧ ಸ್ಮಾರಕದವರೆಗೆ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ನಿರಂತರ 5 ಗಂಟೆಗಳ ಕಾಲ 42 ಕಿಲೋ ಮೀಟರ್ ನಷ್ಟು ಉದ್ದದಷ್ಟು ಆಮ್ಲಜನಕ ಕಡಿಮೆಯಿರುವ ಮತ್ತು ಸಮುದ್ರ ಮಟ್ಟಕ್ಕಿಂತ 10.800 ಅಡಿ ಮೇಲಿರುವ ಪ್ರದೇಶದಲ್ಲಿ ಓಡುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದರು!
ಇವರ ಸಾಧನೆಯು ಬ್ರಾವೊ ಇಂಟರ್ ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆಯಾಗಿ ಸೇರಲಾಗಿದೆ!

ಇತ್ತೀಚಿನ ಸುದ್ದಿ

ಜಾಹೀರಾತು