8:33 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಕನಕದಾಸರು ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ವೈಚಾರಿಕ ಸಂಗತಿಗಳನ್ನು ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತಿದ ಮಹಾನ್ ಚೇತನ 

23/11/2021, 10:09

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಜನಸಾಮಾನ್ಯರ ಆಡು ಭಾಷೆಯಾದ ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ಸಮಾಜದಲ್ಲಿನ ವೈಚಾರಿಕ ಸಂಗತಿಗಳನ್ನು, ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತುವ ಮೂಲಕ ವ್ಯಕ್ತಿಯ ಅಂತರಂಗವನ್ನು ಶುದ್ದೀಕರಿಸುವ ಜೊತೆಗೆ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ಚೇತನ ಕನಕದಾಸರು ಎಂಬುದಾಗಿ ತಾಪಂ ಇಒ ಮಡಗಿನ ಬಸಪ್ಪ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಕ್ತ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 
ಕನಕದಾಸರ ಕೀರ್ತನೆಗಳು ಸಮಾಜದ ಮೇಲುಕೀಳೆಂಬ ಭಾವನೆಗಳನ್ನು ಹೋಗಲಾಡಿಸಿ ಸಾಮಾಜಿಕ ನ್ಯಾಯದಡಿ, ಶೋಷಿತರ ವರ್ಗದ ಎಲ್ಲ ಜನರಿಗೂ ಸಮಾಜದಲ್ಲಿ ತಲೆಎತ್ತಿ ಬದುಕುವಂತೆ ಮಾಡಿದ ಕೀರ್ತಿ ಕನಕದಾಸರಿಗೆ ಸಲ್ಲಬೇಕಾಗುತ್ತದೆ ಎಂದರಲ್ಲದೆ ಜಾತಿ ಮತ್ತು ವರ್ಗ ಪದ್ದತಿ ವಿರುದ್ಧ ಕನಕದಾಸರು ನಡೆಸಿದ ಆಂದೋಲನಕ್ಕೆ ವಿಶ್ವ ಮಾನ್ಯತೆ ಸಿಗಬೇಕಿದೆ ಎಂಬುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು