6:38 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಖಂಡಗ್ರಾಸ ಸೂರ್ಯಗ್ರಹಣ: ಕಡಲ ನಗರಿಯಲ್ಲಿ ಜನರ ಓಡಾಟ ಇಳಿಮುಖ; ಸಿಟಿ ಬಸ್ ಗಳಲ್ಲಿ ಪ್ರಯಾಣಿಕರು ವಿರಳ

25/10/2022, 20:06

ಮಂಗಳೂರು,(reporterkarnataka.com): ದೀಪಾವಳಿ ಹಬ್ಬದ ಎರಡನೇ ದಿನವಾದ ಇಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಿದ್ದು, ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜನರ ಓಡಾಟ, ವಾಹನಗಳ ಸಂಚಾರ ವಿರಳಗೊಂಡಿತ್ತು.

ಜ್ಯೋತಿಷ್ಯ ಲೆಕ್ಕಾಚಾರ ಪ ್ರಕಾರ ಸುಮಾರು 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ ಎಂದು ಕೂಡ ಕರೆಯಲಾಗುತ್ತದೆ.

ಸೂರ್ಯ ಗ್ರಹಣ ಆರಂಭವಾಗುತ್ತಿದ್ದಂತೆ ಮಂಗಳೂರು ನಗರದಲ್ಲಿ ಜನರ ಓಡಾಟ ಹಾಗೂ ಖಾಸಗಿ ವಾಹನಗಳ ಸಂಚಾರ ಕಡಿಮೆ ಆಯಿತು. ಸಿಟಿ, ಸರ್ವಿಸ್ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿತ್ರು. ಮಾಲ್,ಅಂಗಡಿ ಮುಂಗಟ್ಟುಗಳಲ್ಲಿ ಕೂಡ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು.
ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನು ಕಾಣಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು