12:04 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

29/01/2025, 14:47

*10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ*

*ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ: ಸಿಎಂ ಗೆ ದಾಖಲೆ ಸಮೇತ ವಿವರಿಸಿದ ಸಚಿವ ಕೃಷ್ಣಬೈರೇಗೌಡ*

ಬೆಂಗಳೂರು(reporterkarnataka.com):
ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ ಕುರಿತು ಮುಖ್ಯಮಂತ್ರಿ
ಸಿದ್ದರಾಮಯ್ಯ ಫುಲ್ ಖುಷ್ ವ್ಯಕ್ತಪಡಿಸಿದ್ದಾರೆ.
ಬರೀ quantity ವಿಲೇವಾರಿ ಸಾಲದು: quality ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ ಎಂದು ಸಚಿವ ಕೃಷ್ಣಬೈರೇಗೌಡರಿಗೆ ಸಿಎಂ ಸೂಚನೆ ನೀಡಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ನಡೆಸಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಇತರೆ ಮುಖ್ಯಾಂಶಗಳು…

•ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್‌ ಮೂಲಕ ಇದು ಸಾಧ್ಯವಾಗಿದೆ.

•ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಸಿಎಂ ಸೂಚನೆ*

•ನಗರ ಪ್ರದೇಶಗಳಲ್ಲಿ ಮಾಸ್ಟರ್‌ ಪ್ಲಾನ್‌ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್‌, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

*ಆದಷ್ಟು ಬೇಗನೆ ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಬೇಕು*

• ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು*

*ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 3ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು*

*ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು.

*DC ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇ36 ರಷ್ಟು ಪ್ರಕರಣಗಳ ವಿಲೇವಾರಿ*

ಇತ್ತೀಚಿನ ಸುದ್ದಿ

ಜಾಹೀರಾತು