12:48 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಸೂಚನೆ

06/02/2025, 20:35

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ‌ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೀಜೋತ್ಪಾದನೆ, ಗುರಿ ಸಾಧನೆಗೆ ಜೊತೆಗೆ ಸುಧಾರಿತ ಸೇವಾ ಸೌಲಭ್ಯವನ್ನು ಒದಗಿಸಿ ಎಂದು ನಿರ್ದೇಶನ ನೀಡಿದರು.
ಕೃಷಿ ಅಭ್ಯುದಯದ ಆಶಯದೊಂದಿಗೆ ರಚನೆಗೊಂಡಿರುವ ಕರ್ನಾಟಕ ರಾಜ್ಯ ಬೀಜ ನಿಗಮವು ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಪರಿಣಾಮಕಾರಿ ಪರಿವರ್ತನೆಗಳೊಂದಿಗೆ ರೈತರಿಗೆ ಇನ್ನಷ್ಟು ಗುಣಾತ್ಮಕ ಸೇವೆ ಒದಗಿಸಬೇಕು ಎಂದರು.
ನಿಗಮದಿಂದ ರೈತರಿಗೆ ಹಾಗೂ ಷೇರುದಾರರಿಗೆ 4.30 ಕೋಟಿ ರೂ ಲಾಭಂಶ ವಿತರಣೆ ಮಾಡಿರುವುದು ಅಭಿನಂದನೀಯ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ನಿಗಮವು 2024-25ನೇ ಸಾಲಿನಲ್ಲಿ 4.30 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಹೊಂದಿದ್ದು, ಈ ತನಕ 0.75 ಲಕ್ಷ ಕ್ವಿಂಟಾಲ್ ದಾಸ್ತಾನು ಸ್ವೀಕರಿಸಲಾಗಿದೆ. ಉಳಿಕೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಹೇಳಿದರು.
ರಸಗೊಬ್ಬರ ಕಾಪು ದಾಸ್ತಾನು ಯೋಜನೆಯಡಿ 2024-25ನೇ ಸಾಲಿನಲ್ಲಿ 1.18 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪಡೆದು 1.10 ಲಕ್ಷ ಮೆಟ್ರಿಕ್ ಟನ್ ವಿತರಿಸಿದ್ದು, ಬಾಕಿ 0.8 ಲಕ್ಷ ಮೆಟ್ರಿಕ್ ಟನ್ ಆದಷ್ಟು ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದರು.
ICRISAT ಹೈದರಾಬಾದ್‌ನೊಂದಿಗೆ ಹೊಸತಳಿ ಅಳವಡಿಕೆ ಬಗ್ಗೆ MoU ಮಾಡಿಕೊಂಡಿದ್ದು, ಇದುವರೆಗಿನ ಪ್ರಗತಿ ಏನು? ಯಾವ ತಳಿ ಅಳವಡಿಸಲಾಗಿದೆ? ರೈತರಿಗೆ ಆಗಿರುವ ಪ್ರಯೋಜನವೇನು? ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ನಿಗಮದ ಕಾರ್ಯ ಚಟುವಟಿಕೆಗಳು ರೈತರ ಹೊಲಗಳಲ್ಲಿ ರಚನಾತ್ಮಕ ಪರಿಣಾಮ ಬೀರುವುದನ್ನು ಖಾತರಿ ಪಡಿಸಿಕೊಳ್ಳುವಂತೆ ನರ್ದೇಶನ ನೀಡಿದರು.
N.F.S.M ಯೋಜನೆಯಡಿ 2023-24 ಮತ್ತು 2024-25ನೇ ಸಾಲಿನಲ್ಲಿ ಉತ್ಪಾದಿಸಿದ ನ್ಯೂಟ್ರಿಸಿರಿಯಲ್ಸ್ ಮತ್ತು ದ್ವೀದಳ ಧಾನ್ಯ ಪ್ರಮಾಣಿತ ಬೀಜಗಳಿಗೆ ಒಟ್ಟಾರೆ ರೂ.10.38 ಕೋಟಿ ಪ್ರೋತ್ಸಾಹಧನ ಪಡೆಯಲಾಗಿದ್ದು,
ಆದಷ್ಟು ಬೇಗ ಪೂರ್ಣಗೊಳಿಸುವಂತೆ ತಿಳಿಸಿದರು.
2025-26ನೇ ಸಾಲಿನಲ್ಲಿ ರೈತರಿಗೆ ನಿಯಮಿತವಾಗಿ ಬಿತ್ತನೆ ಬೀಜ ಪೂರೈಸುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಇದೇ ವೇಳೆ ಕೃಷಿ ಇಲಾಖೆ ಕಾರ್ಯದರ್ಶಿ ಡಾ.ರವಿಶಂಕರ್, ಆಯುಕ್ತ ವೈ‌.ಎಸ್.ಪಾಟೀಲ್, ಕರ್ನಾಟಕ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೇವರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು ‌.
#@agriculturalministerofkarnataka#agriculturalministercheluvarayaswamy#karnatakaagriculturaldepartment#karnatakagovt#karnatakacm

ಇತ್ತೀಚಿನ ಸುದ್ದಿ

ಜಾಹೀರಾತು