1:02 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ

25/10/2022, 11:26

ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ಕೈಗೊಂಬೆ ಆಗಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಇದು ಅನೈತಿಕ, ಕಾನೂನು ಬಾಹಿರ ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಟೋಲ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು. ಇದಕ್ಕಾಗಿ ಅವರನ್ನು ಗುರಿಯಾಗಿಸಿ ಅವರ ವಿರುದ್ಧ ಅಸಹ್ಯ ಪ್ರಚಾರ ಮಾಡಲಾಗಿದೆ. ಚಾನೆಲ್ ಗಳೂ ಈ ಅಸಹ್ಯ ಕೆಲಸ ಮಾಡಿವೆ. ಕಾಣಿಯೂರು ಬಳಿ ಹಲ್ಲೆ ಮತ್ತು ಪ್ರತಿಭಾ ಕುಳಾಯಿ ಮೇಲೆ ನಡೆದ ಅನೈತಿಕ ಪ್ರಚಾರಕ್ಕೆ ಕೆಲವರ ದ್ವೇಷ ಭಾಷಣಗಳೇ ಕಾರಣ.ಎಂದು ಲೋಬೋ ನುಡಿದರು.

ಚಿರತೆ ಬಸಿರಾದಂತಹ ಕಾರ್ಟೂನ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಕ್ಕೆ ಹೋರಾಟಗಾರರೊಬ್ಬರನ್ನು ಬಂಧಿಸಿರುವುದು ಏನನ್ನು ಸೂಚಿಸುತ್ತದೆ. ಕಾನೂನು ಮುರಿಯುವ ಎಲ್ಲರ ಮೇಲೆ ಕೆಲಸ ಕ್ರಮ ತೆಗೆದುಕೊಳ್ಳಿ. ಪೊಲೀಸರು ಜನರಿಗೆ ನ್ಯಾಯ ದೊರಕಿಸಲಿ. ಸಂವಿಧಾನದ ಪ್ರಕಾರ ದೇಶ ನಡೆಯಲಿ ಎಂದು ಲೋಬೋ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ ಪ್ರಕಾಶ್ ಸಾಲಿಯಾನ್, ಚಂದ್ರಕಲಾ, ಶಾಂತಲಾ ಗಟ್ಟಿ, ಹಮೀದ್, ಅಶ್ರಫ್, ಟಿ. ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು