4:22 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ

25/10/2022, 11:26

ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ಕೈಗೊಂಬೆ ಆಗಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಇದು ಅನೈತಿಕ, ಕಾನೂನು ಬಾಹಿರ ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಟೋಲ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು. ಇದಕ್ಕಾಗಿ ಅವರನ್ನು ಗುರಿಯಾಗಿಸಿ ಅವರ ವಿರುದ್ಧ ಅಸಹ್ಯ ಪ್ರಚಾರ ಮಾಡಲಾಗಿದೆ. ಚಾನೆಲ್ ಗಳೂ ಈ ಅಸಹ್ಯ ಕೆಲಸ ಮಾಡಿವೆ. ಕಾಣಿಯೂರು ಬಳಿ ಹಲ್ಲೆ ಮತ್ತು ಪ್ರತಿಭಾ ಕುಳಾಯಿ ಮೇಲೆ ನಡೆದ ಅನೈತಿಕ ಪ್ರಚಾರಕ್ಕೆ ಕೆಲವರ ದ್ವೇಷ ಭಾಷಣಗಳೇ ಕಾರಣ.ಎಂದು ಲೋಬೋ ನುಡಿದರು.

ಚಿರತೆ ಬಸಿರಾದಂತಹ ಕಾರ್ಟೂನ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಕ್ಕೆ ಹೋರಾಟಗಾರರೊಬ್ಬರನ್ನು ಬಂಧಿಸಿರುವುದು ಏನನ್ನು ಸೂಚಿಸುತ್ತದೆ. ಕಾನೂನು ಮುರಿಯುವ ಎಲ್ಲರ ಮೇಲೆ ಕೆಲಸ ಕ್ರಮ ತೆಗೆದುಕೊಳ್ಳಿ. ಪೊಲೀಸರು ಜನರಿಗೆ ನ್ಯಾಯ ದೊರಕಿಸಲಿ. ಸಂವಿಧಾನದ ಪ್ರಕಾರ ದೇಶ ನಡೆಯಲಿ ಎಂದು ಲೋಬೋ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ ಪ್ರಕಾಶ್ ಸಾಲಿಯಾನ್, ಚಂದ್ರಕಲಾ, ಶಾಂತಲಾ ಗಟ್ಟಿ, ಹಮೀದ್, ಅಶ್ರಫ್, ಟಿ. ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು