5:11 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ

25/10/2022, 11:26

ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ಕೈಗೊಂಬೆ ಆಗಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಇದು ಅನೈತಿಕ, ಕಾನೂನು ಬಾಹಿರ ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಟೋಲ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು. ಇದಕ್ಕಾಗಿ ಅವರನ್ನು ಗುರಿಯಾಗಿಸಿ ಅವರ ವಿರುದ್ಧ ಅಸಹ್ಯ ಪ್ರಚಾರ ಮಾಡಲಾಗಿದೆ. ಚಾನೆಲ್ ಗಳೂ ಈ ಅಸಹ್ಯ ಕೆಲಸ ಮಾಡಿವೆ. ಕಾಣಿಯೂರು ಬಳಿ ಹಲ್ಲೆ ಮತ್ತು ಪ್ರತಿಭಾ ಕುಳಾಯಿ ಮೇಲೆ ನಡೆದ ಅನೈತಿಕ ಪ್ರಚಾರಕ್ಕೆ ಕೆಲವರ ದ್ವೇಷ ಭಾಷಣಗಳೇ ಕಾರಣ.ಎಂದು ಲೋಬೋ ನುಡಿದರು.

ಚಿರತೆ ಬಸಿರಾದಂತಹ ಕಾರ್ಟೂನ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಕ್ಕೆ ಹೋರಾಟಗಾರರೊಬ್ಬರನ್ನು ಬಂಧಿಸಿರುವುದು ಏನನ್ನು ಸೂಚಿಸುತ್ತದೆ. ಕಾನೂನು ಮುರಿಯುವ ಎಲ್ಲರ ಮೇಲೆ ಕೆಲಸ ಕ್ರಮ ತೆಗೆದುಕೊಳ್ಳಿ. ಪೊಲೀಸರು ಜನರಿಗೆ ನ್ಯಾಯ ದೊರಕಿಸಲಿ. ಸಂವಿಧಾನದ ಪ್ರಕಾರ ದೇಶ ನಡೆಯಲಿ ಎಂದು ಲೋಬೋ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ ಪ್ರಕಾಶ್ ಸಾಲಿಯಾನ್, ಚಂದ್ರಕಲಾ, ಶಾಂತಲಾ ಗಟ್ಟಿ, ಹಮೀದ್, ಅಶ್ರಫ್, ಟಿ. ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು