6:24 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ

25/10/2022, 11:26

ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ಕೈಗೊಂಬೆ ಆಗಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಜೆ. ಆರ್. ಲೋಬೋ ಟೀಕಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಇದು ಅನೈತಿಕ, ಕಾನೂನು ಬಾಹಿರ ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಟೋಲ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದರು. ಇದಕ್ಕಾಗಿ ಅವರನ್ನು ಗುರಿಯಾಗಿಸಿ ಅವರ ವಿರುದ್ಧ ಅಸಹ್ಯ ಪ್ರಚಾರ ಮಾಡಲಾಗಿದೆ. ಚಾನೆಲ್ ಗಳೂ ಈ ಅಸಹ್ಯ ಕೆಲಸ ಮಾಡಿವೆ. ಕಾಣಿಯೂರು ಬಳಿ ಹಲ್ಲೆ ಮತ್ತು ಪ್ರತಿಭಾ ಕುಳಾಯಿ ಮೇಲೆ ನಡೆದ ಅನೈತಿಕ ಪ್ರಚಾರಕ್ಕೆ ಕೆಲವರ ದ್ವೇಷ ಭಾಷಣಗಳೇ ಕಾರಣ.ಎಂದು ಲೋಬೋ ನುಡಿದರು.

ಚಿರತೆ ಬಸಿರಾದಂತಹ ಕಾರ್ಟೂನ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಕ್ಕೆ ಹೋರಾಟಗಾರರೊಬ್ಬರನ್ನು ಬಂಧಿಸಿರುವುದು ಏನನ್ನು ಸೂಚಿಸುತ್ತದೆ. ಕಾನೂನು ಮುರಿಯುವ ಎಲ್ಲರ ಮೇಲೆ ಕೆಲಸ ಕ್ರಮ ತೆಗೆದುಕೊಳ್ಳಿ. ಪೊಲೀಸರು ಜನರಿಗೆ ನ್ಯಾಯ ದೊರಕಿಸಲಿ. ಸಂವಿಧಾನದ ಪ್ರಕಾರ ದೇಶ ನಡೆಯಲಿ ಎಂದು ಲೋಬೋ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಧರ ಹೆಗ್ಡೆ ಪ್ರಕಾಶ್ ಸಾಲಿಯಾನ್, ಚಂದ್ರಕಲಾ, ಶಾಂತಲಾ ಗಟ್ಟಿ, ಹಮೀದ್, ಅಶ್ರಫ್, ಟಿ. ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು