6:40 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು