11:09 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು