11:27 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಕಂಕನಾಡಿ ಗರೋಡಿ 150ರ ಸಂಭ್ರಮ: ಮಂಗಳಾದೇವಿಯಿಂದ ಹಸಿರು ಹೊರೆಕಾಣಿಕೆ

03/03/2023, 23:09

ಮಂಗಳೂರು(reporterkarnataka.com):ನಗರದ ಕಂಕನಾಡಿ ಗರೋಡಿ ಕ್ಷೇತ್ರದ 150ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಹಸಿರು ಹೊರೆಕಾಣಿಕೆಯನ್ನು ಮಂಗಳಾದೇವಿ ಬಿಲ್ಲವ ಸಂಘದ ವತಿಯಿಂದ ಮಂಗಳಾದೇವಿ ದೇವಸ್ಥಾನದ ವಠಾರದಿಂದ ದೇವಸ್ಥಾನದ ಆಡಳಿತ ಮೊಕ್ತೆಸರಾದ ರಮಾನಾಥ ಹೆಗ್ಡೆ ಮತ್ತು ಅತ್ತಾವರ ಅರಸು ಮುಂಡಿತ್ತಾಯ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿದ್ಯಾಧರ ಮತ್ತು ಬಿಲ್ಲವ ಸಂಘದ ಸದಸ್ಯರು ಸೇರಿಕೊಂಡು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಹೊರೆಕಾಣಿಕೆಗೆ ಬೊಳಾರ ಮಂಗಳಾ ಕ್ಯಾಟರಿಂಗ್ ಮಾಲಕರಾದ ಸತೀಶ್ ಮತ್ತು ರೊಹಿದಾಸ್ ಹಾಗೂ ಬೊಳಾರ ಮಾರಿಗುಡಿ ಕರಸೇವಕರ ಭಕ್ತ ವ್ರಂದ ಹಾಗೂ ಆಸು ಪಾಸಿನ ಸಂಘ ಸಂಸ್ತೆಗಳು ಹೊರೆಕಾಣಿಕೆ ಯನ್ನು ನೀಡಿ ಸಹಕರಿಸಿದ್ದಾರೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಿ. ರಮಾನಂದ ಪೂಜಾರಿ ವಂದಿಸಿದರು.
ಹಸಿರು ಹೊರ ಕಾಣಿಕೆಯ ಮೆರವಣಿಗೆಗೆ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿದರು. ಹಿರಿಯ ಸದಸ್ಯರಾದ ಕೆ.ಜಿ. ವಿಮಲಾ ಮೋನಪ್ಪ ಅಂಚನ್ ಹಾಗೂ ಸಲಹೆಗಾರರಾದ ವೇಣುಗೋಪಾಲ್, ಸಂಚಾಲಕ ದಿನೇಶ್ ಕುಮಾರ್ ತರುಣ್ ಮಹಿಳಾ ಘಟಕದ ಎಲ್ಲಾ ಸದಸ್ಯರು ಹಾಗೂ ಸಂಘದ ಎಲ್ಲಾ ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು