5:12 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ

13/01/2025, 20:22

ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ ನೋಡಿ ಎಂದರು.
ನಾಯಕ ನಟ ಅಥರ್ವ ಪ್ರಕಾಶ್ ಮಾತನಾಡಿ,ನನ್ನ ಮೊದಲ ಸಿನಿಮಾ ತುಳುವಿನ ಚಾಲಿಪೋಲಿಲು, ನಂತರ ನಾನು ಎಂಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈ ಸಿನಿಮಾದಲ್ಲಿ ಬಹುತೇಕ ಎಲ್ಲರೂ ತುಳು ಕಲಾವಿದರೇ ಇದ್ದಾರೆ. ಸಿನಿಮಾದ ಕುರಿತು ನನಗೆ ಹೆಚ್ಚಿನ ನಿರೀಕ್ಷೆಯಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.
ನಾಯಕಿ ಪ್ರಾರ್ಥನಾ ಮಾತಾಡಿ, ನಾನು ಮಂಗಳೂರ ಹುಡುಗಿ. ಸಿನಿಮಾದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತುಳು ರಂಗಭೂಮಿಯ ಬಹುತೇಕ ಕಲಾವಿದರು ಸಿನಿಮಾದಲ್ಲಿದ್ದಾರೆ. ಎಲ್ಲರೂ ಚಿತ್ರತಂಡವನ್ನು ಪ್ರೋತ್ಸಾಹಿಸಿ ಎಂದರು.
ನಟ ಜ್ಯೋತಿಷ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಮಂಗಳೂರಿನ ಮಣ್ಣಿನ ಸೊಗಡು ಈ ಸಿನಿಮಾದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಎಂದರು.
ನಟರಾಜ್ ಸಿನಿಮಾ ನಿರ್ದೇಶನ ಮಾಡಿದ್ದು ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಕಲಾ ರಾವ್, ನಮಿತಾ ಇತರರು ಸಿನಿಮಾದ ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅನಿತಾ, ರವಿ ರಾಮಕುಂಜ, ರಾಜೇಶ್ ಸ್ಕೈ ಲಾರ್ಕ್ , ನಿರ್ಮಾಪಕಿ ಅನಿತಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು