8:58 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ

13/01/2025, 20:22

ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ ನೋಡಿ ಎಂದರು.
ನಾಯಕ ನಟ ಅಥರ್ವ ಪ್ರಕಾಶ್ ಮಾತನಾಡಿ,ನನ್ನ ಮೊದಲ ಸಿನಿಮಾ ತುಳುವಿನ ಚಾಲಿಪೋಲಿಲು, ನಂತರ ನಾನು ಎಂಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈ ಸಿನಿಮಾದಲ್ಲಿ ಬಹುತೇಕ ಎಲ್ಲರೂ ತುಳು ಕಲಾವಿದರೇ ಇದ್ದಾರೆ. ಸಿನಿಮಾದ ಕುರಿತು ನನಗೆ ಹೆಚ್ಚಿನ ನಿರೀಕ್ಷೆಯಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.
ನಾಯಕಿ ಪ್ರಾರ್ಥನಾ ಮಾತಾಡಿ, ನಾನು ಮಂಗಳೂರ ಹುಡುಗಿ. ಸಿನಿಮಾದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತುಳು ರಂಗಭೂಮಿಯ ಬಹುತೇಕ ಕಲಾವಿದರು ಸಿನಿಮಾದಲ್ಲಿದ್ದಾರೆ. ಎಲ್ಲರೂ ಚಿತ್ರತಂಡವನ್ನು ಪ್ರೋತ್ಸಾಹಿಸಿ ಎಂದರು.
ನಟ ಜ್ಯೋತಿಷ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಮಂಗಳೂರಿನ ಮಣ್ಣಿನ ಸೊಗಡು ಈ ಸಿನಿಮಾದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಎಂದರು.
ನಟರಾಜ್ ಸಿನಿಮಾ ನಿರ್ದೇಶನ ಮಾಡಿದ್ದು ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಕಲಾ ರಾವ್, ನಮಿತಾ ಇತರರು ಸಿನಿಮಾದ ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅನಿತಾ, ರವಿ ರಾಮಕುಂಜ, ರಾಜೇಶ್ ಸ್ಕೈ ಲಾರ್ಕ್ , ನಿರ್ಮಾಪಕಿ ಅನಿತಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು