5:15 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ

13/01/2025, 20:22

ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ ನೋಡಿ ಎಂದರು.
ನಾಯಕ ನಟ ಅಥರ್ವ ಪ್ರಕಾಶ್ ಮಾತನಾಡಿ,ನನ್ನ ಮೊದಲ ಸಿನಿಮಾ ತುಳುವಿನ ಚಾಲಿಪೋಲಿಲು, ನಂತರ ನಾನು ಎಂಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈ ಸಿನಿಮಾದಲ್ಲಿ ಬಹುತೇಕ ಎಲ್ಲರೂ ತುಳು ಕಲಾವಿದರೇ ಇದ್ದಾರೆ. ಸಿನಿಮಾದ ಕುರಿತು ನನಗೆ ಹೆಚ್ಚಿನ ನಿರೀಕ್ಷೆಯಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.
ನಾಯಕಿ ಪ್ರಾರ್ಥನಾ ಮಾತಾಡಿ, ನಾನು ಮಂಗಳೂರ ಹುಡುಗಿ. ಸಿನಿಮಾದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತುಳು ರಂಗಭೂಮಿಯ ಬಹುತೇಕ ಕಲಾವಿದರು ಸಿನಿಮಾದಲ್ಲಿದ್ದಾರೆ. ಎಲ್ಲರೂ ಚಿತ್ರತಂಡವನ್ನು ಪ್ರೋತ್ಸಾಹಿಸಿ ಎಂದರು.
ನಟ ಜ್ಯೋತಿಷ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಮಂಗಳೂರಿನ ಮಣ್ಣಿನ ಸೊಗಡು ಈ ಸಿನಿಮಾದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಎಂದರು.
ನಟರಾಜ್ ಸಿನಿಮಾ ನಿರ್ದೇಶನ ಮಾಡಿದ್ದು ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಕಲಾ ರಾವ್, ನಮಿತಾ ಇತರರು ಸಿನಿಮಾದ ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅನಿತಾ, ರವಿ ರಾಮಕುಂಜ, ರಾಜೇಶ್ ಸ್ಕೈ ಲಾರ್ಕ್ , ನಿರ್ಮಾಪಕಿ ಅನಿತಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು