5:37 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ?

19/09/2022, 22:37

ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿ ಅಷ್ಟೇ ವೇಗದಲ್ಲಿ ಮರೆಯಾದ ಮಾಜಿ ಸಂಸದೆ ರಮ್ಯಾ ಇದೀಗ ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷದೊಳಗೆ ಕಡೆಗಣನೆಗೆ ಒಳಗಾದಂತೆ ಕಂಡುಬಂದಿರುವ ಅವರು ಕಮಲ ಪಾಳಯದೊಳಗೆ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕಿಳಿದಿದ್ದಾರೆ ಎನ್ನಲಾಗಿದೆ.

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುವುದಕ್ಕೆ ಇನ್ನೂ ಮೀನಮೇಷ ಎಣಿಸುತ್ತಿದ್ದಾರೆ. ಪಕ್ಷ ಸೇರ್ಪಡೆ ಕುರಿತು ಸ್ಪಷ್ಟತೀರ್ಮಾನ ಕೈಗೊಳ್ಳಲಾಗದೆ ಗೊಂದಲದಲ್ಲಿದ್ದಾರೆ. ಸುಮಲತಾ ಸೇರ್ಪಡೆ ವಿಚಾರ ಇನ್ನೂ ರಾಷ್ಟ್ರ ನಾಯಕರ ಹಂತದಲ್ಲಿದೆ. ಆ ಮಾತುಕತೆ ಮುರಿದುಬಿದ್ದರೆ ರಮ್ಯಾ ಬಿಜೆಪಿ ಸೇರುವುದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ರಮ್ಯಾ ಬಿಜೆಪಿ ಸೇರುವ ವಿಚಾರವಿನ್ನೂ ಪ್ರಾಥಮಿಕ ಹಂತದಲ್ಲಿದೆ. ಇನ್ನೂ ಈ ಬಗ್ಗೆ ಎರಡು ಮೂರು ಸುತ್ತಿನ ಮಾತುಕತೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಸ್ಪಷ್ಟಚಿತ್ರಣ ಸಿಗುವುದು ಕಷ್ಟ.

ರಮ್ಯಾ ವರ್ಚಸ್ಸು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ, 2015ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಮ್ಯಾ ಸೋಲಿಗೆ ಕಾರಣವಾಗಿ ಜಿಲ್ಲೆಯಿಂದ ನಿರ್ಗಮಿಸುವಂತೆ ಮಾಡಿತು.

ಇತ್ತೀಚಿನ ಸುದ್ದಿ

ಜಾಹೀರಾತು