4:09 PM Monday28 - July 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ…

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ?

19/09/2022, 22:37

ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿ ಅಷ್ಟೇ ವೇಗದಲ್ಲಿ ಮರೆಯಾದ ಮಾಜಿ ಸಂಸದೆ ರಮ್ಯಾ ಇದೀಗ ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷದೊಳಗೆ ಕಡೆಗಣನೆಗೆ ಒಳಗಾದಂತೆ ಕಂಡುಬಂದಿರುವ ಅವರು ಕಮಲ ಪಾಳಯದೊಳಗೆ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕಿಳಿದಿದ್ದಾರೆ ಎನ್ನಲಾಗಿದೆ.

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುವುದಕ್ಕೆ ಇನ್ನೂ ಮೀನಮೇಷ ಎಣಿಸುತ್ತಿದ್ದಾರೆ. ಪಕ್ಷ ಸೇರ್ಪಡೆ ಕುರಿತು ಸ್ಪಷ್ಟತೀರ್ಮಾನ ಕೈಗೊಳ್ಳಲಾಗದೆ ಗೊಂದಲದಲ್ಲಿದ್ದಾರೆ. ಸುಮಲತಾ ಸೇರ್ಪಡೆ ವಿಚಾರ ಇನ್ನೂ ರಾಷ್ಟ್ರ ನಾಯಕರ ಹಂತದಲ್ಲಿದೆ. ಆ ಮಾತುಕತೆ ಮುರಿದುಬಿದ್ದರೆ ರಮ್ಯಾ ಬಿಜೆಪಿ ಸೇರುವುದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ರಮ್ಯಾ ಬಿಜೆಪಿ ಸೇರುವ ವಿಚಾರವಿನ್ನೂ ಪ್ರಾಥಮಿಕ ಹಂತದಲ್ಲಿದೆ. ಇನ್ನೂ ಈ ಬಗ್ಗೆ ಎರಡು ಮೂರು ಸುತ್ತಿನ ಮಾತುಕತೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಸ್ಪಷ್ಟಚಿತ್ರಣ ಸಿಗುವುದು ಕಷ್ಟ.

ರಮ್ಯಾ ವರ್ಚಸ್ಸು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ, 2015ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಮ್ಯಾ ಸೋಲಿಗೆ ಕಾರಣವಾಗಿ ಜಿಲ್ಲೆಯಿಂದ ನಿರ್ಗಮಿಸುವಂತೆ ಮಾಡಿತು.

ಇತ್ತೀಚಿನ ಸುದ್ದಿ

ಜಾಹೀರಾತು