8:22 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್‌ನೆಸ್ ಕಾಳಜಿಯೇ ಜೀವಕ್ಕೆ ಮುಳುವಾಯಿತೆ ?

29/10/2021, 14:26

Reporterkarnataka.com

‘ಅಪ್ಪು’ ಖ್ಯಾತಿಯ ಪವರ್ ಸ್ಟಾರ್
ಪುನೀತ್​ ರಾಜ್​ಕುಮಾರ್ ಇನ್ನು ನೆನಪು ಮಾತ್ರ.

ಕನ್ನಡದ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿತ್ತು.

ತಕ್ಷಣ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಹೃದಯಾಘಾತವಾಗಿರುವುದು ಅಭಿಮಾನಿಗಳನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು