5:04 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ

06/03/2025, 10:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ “ಕೀರಿಕಾಡು ಮಾಸ್ಟರ್ ವಿಷ್ಣು ಭಟ್ “ಸಂಸ್ಮರಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಲೇಖಕ ಡಾ. ಕೊಲಚಪ್ಪೆ ಗೋವಿಂದ ಭಟ್ , ಕಾರ್ಯದರ್ಶಿಯಾಗಿ ಅಪೂರ್ವ ಕಾರಂತ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಚು. ಸಾ. ಪ. ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ನಾಮನಿರ್ದೇಶನ ಮಾಡಿದರು. ಇನ್ನೊರ್ವ ಸಂಚಾಲಕರಾದ ಡಾ. ಶಾಂತ ಪುತ್ತೂರು ಅವರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಡಾ. ಕೆ. ಗೋವಿಂದ ಭಟ್ ಮತ್ತು ಅಪೂರ್ವ ಕಾರಂತ್ ಇವರಿಗೆ ಸಂಸ್ಥೆಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಹಾಗೂ ಗೌರವಾಧ್ಯಕ್ಷರಾದ ಶಿಕ್ಷಣ ತಜ್ಞ, ಸಾಹಿತಿ ವಿ. ಬಿ. ಕುಳಮರ್ವ ಕನ್ನಡ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್, ಅಪೂರ್ವ ಕಾರಂತ್ ಅವರಿಗೆ ಶಾಲು ಹೊದಿಸಿ, ಅಧಿಕಾರ ಪತ್ರ, ಕಾರ್ಯಸೂಚಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ವಿರಾಜ್ ಅಡೂರ್, ಕೋಶಾಧಿಕಾರಿ ಸಂಧ್ಯಾರಾಣಿ, ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್, ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ, ಕರ್ನಾಟಕ ರಾಜ್ಯ ಸಂಚಾಲಕಿ ಡಾ ಶಾಂತ ಪುತ್ತೂರು ಜತೆಗಿದ್ದರು. ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್ ತನ್ನ ಕೃತಜ್ಞತಾ ಭಾಷಣದಲ್ಲಿ “ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಶೀಘ್ರದಲ್ಲಿ ವಿಸ್ತರಿಸಿ ಬರುವ ಏಪ್ರಿಲ್ ತಿಂಗಳಲ್ಲಿ 100ಮಂದಿ ಚುಟುಕು ಕವಿಗಳ ಕವಿಗೋಷ್ಠಿಯೊಂದಿಗೆ ಮಂಗಳೂರಿನಲ್ಲಿ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು