12:59 AM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ

06/03/2025, 10:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ “ಕೀರಿಕಾಡು ಮಾಸ್ಟರ್ ವಿಷ್ಣು ಭಟ್ “ಸಂಸ್ಮರಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಲೇಖಕ ಡಾ. ಕೊಲಚಪ್ಪೆ ಗೋವಿಂದ ಭಟ್ , ಕಾರ್ಯದರ್ಶಿಯಾಗಿ ಅಪೂರ್ವ ಕಾರಂತ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಚು. ಸಾ. ಪ. ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ನಾಮನಿರ್ದೇಶನ ಮಾಡಿದರು. ಇನ್ನೊರ್ವ ಸಂಚಾಲಕರಾದ ಡಾ. ಶಾಂತ ಪುತ್ತೂರು ಅವರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಡಾ. ಕೆ. ಗೋವಿಂದ ಭಟ್ ಮತ್ತು ಅಪೂರ್ವ ಕಾರಂತ್ ಇವರಿಗೆ ಸಂಸ್ಥೆಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಹಾಗೂ ಗೌರವಾಧ್ಯಕ್ಷರಾದ ಶಿಕ್ಷಣ ತಜ್ಞ, ಸಾಹಿತಿ ವಿ. ಬಿ. ಕುಳಮರ್ವ ಕನ್ನಡ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್, ಅಪೂರ್ವ ಕಾರಂತ್ ಅವರಿಗೆ ಶಾಲು ಹೊದಿಸಿ, ಅಧಿಕಾರ ಪತ್ರ, ಕಾರ್ಯಸೂಚಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ವಿರಾಜ್ ಅಡೂರ್, ಕೋಶಾಧಿಕಾರಿ ಸಂಧ್ಯಾರಾಣಿ, ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್, ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ, ಕರ್ನಾಟಕ ರಾಜ್ಯ ಸಂಚಾಲಕಿ ಡಾ ಶಾಂತ ಪುತ್ತೂರು ಜತೆಗಿದ್ದರು. ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್ ತನ್ನ ಕೃತಜ್ಞತಾ ಭಾಷಣದಲ್ಲಿ “ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಶೀಘ್ರದಲ್ಲಿ ವಿಸ್ತರಿಸಿ ಬರುವ ಏಪ್ರಿಲ್ ತಿಂಗಳಲ್ಲಿ 100ಮಂದಿ ಚುಟುಕು ಕವಿಗಳ ಕವಿಗೋಷ್ಠಿಯೊಂದಿಗೆ ಮಂಗಳೂರಿನಲ್ಲಿ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು