8:08 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Kannada Literature | ಕನ್ನಡ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷರಾಗಿ ಡಾ.ಕೊಲಚಪ್ಪೆ ಗೋವಿಂದ ಭಟ್ ಆಯ್ಕೆ

06/03/2025, 10:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಾಸರಗೋಡು ಕನ್ನಡ ಭವನ ಗ್ರಂಥಾಲಯ ರೂವಾರಿಗಳಾದ ಡಾ. ವಾಮನ್ ರಾವ್ -ಸಂಧ್ಯಾರಾಣಿ ದಂಪತಿ ಸ್ಥಾಪಿಸಿದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕದ “ಕೀರಿಕಾಡು ಮಾಸ್ಟರ್ ವಿಷ್ಣು ಭಟ್ “ಸಂಸ್ಮರಣೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಲೇಖಕ ಡಾ. ಕೊಲಚಪ್ಪೆ ಗೋವಿಂದ ಭಟ್ , ಕಾರ್ಯದರ್ಶಿಯಾಗಿ ಅಪೂರ್ವ ಕಾರಂತ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಚು. ಸಾ. ಪ. ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ನಾಮನಿರ್ದೇಶನ ಮಾಡಿದರು. ಇನ್ನೊರ್ವ ಸಂಚಾಲಕರಾದ ಡಾ. ಶಾಂತ ಪುತ್ತೂರು ಅವರು ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಡಾ. ಕೆ. ಗೋವಿಂದ ಭಟ್ ಮತ್ತು ಅಪೂರ್ವ ಕಾರಂತ್ ಇವರಿಗೆ ಸಂಸ್ಥೆಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಹಾಗೂ ಗೌರವಾಧ್ಯಕ್ಷರಾದ ಶಿಕ್ಷಣ ತಜ್ಞ, ಸಾಹಿತಿ ವಿ. ಬಿ. ಕುಳಮರ್ವ ಕನ್ನಡ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್, ಅಪೂರ್ವ ಕಾರಂತ್ ಅವರಿಗೆ ಶಾಲು ಹೊದಿಸಿ, ಅಧಿಕಾರ ಪತ್ರ, ಕಾರ್ಯಸೂಚಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ವಿರಾಜ್ ಅಡೂರ್, ಕೋಶಾಧಿಕಾರಿ ಸಂಧ್ಯಾರಾಣಿ, ಸಂಘಟನಾ ಕಾರ್ಯದರ್ಶಿ ಶಾರದಾ ಮೊಳೆಯಾರ್, ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ, ಕರ್ನಾಟಕ ರಾಜ್ಯ ಸಂಚಾಲಕಿ ಡಾ ಶಾಂತ ಪುತ್ತೂರು ಜತೆಗಿದ್ದರು. ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಡಾ. ಕೊಲಚಪ್ಪೆ ಗೋವಿಂದ ಭಟ್ ತನ್ನ ಕೃತಜ್ಞತಾ ಭಾಷಣದಲ್ಲಿ “ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಶೀಘ್ರದಲ್ಲಿ ವಿಸ್ತರಿಸಿ ಬರುವ ಏಪ್ರಿಲ್ ತಿಂಗಳಲ್ಲಿ 100ಮಂದಿ ಚುಟುಕು ಕವಿಗಳ ಕವಿಗೋಷ್ಠಿಯೊಂದಿಗೆ ಮಂಗಳೂರಿನಲ್ಲಿ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು