10:59 AM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಕನ್ನಡ ಶಾಲೆ ಉಳಿಸುವ ಕಾರ್ಯಕ್ರಮ ಕಾಂಗ್ರೆಸ್ ಗೆ ಯಾಕೆ ಪಥ್ಯವಾಗುತ್ತಿಲ್ಲ: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

18/11/2022, 22:27

ಸುರತ್ಕಲ್(reporterkarnataka.com): ಕನ್ನಡ ಶಾಲೆಯನ್ನು ಪ್ರೋತ್ಸಾಹಿಸುವ ಜತೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವ ಹಾಗೂ ಅವರಲ್ಲಿ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಇದಾಗಿದ್ದು,ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಮಾಡುತ್ತಿದೆ.

ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವ ರಾಜಕೀಯ ಲಕ್ಷಣ ಕಂಡಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಪ್ರಶ್ನಿಸಿದ್ದಾರೆ.
ಕನ್ನಡ ಶಾಲೆಗಳು ಹೆಚ್ಚಾಗಿ ಸರಕಾರದ ಶಾಲೆಗಳಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಸೇರಲು ಆಯಾ ವಿಭಾಗದ ಶಿಕ್ಷಣ ಅಧಿಕಾರಿಗಳ ಅನುಮತಿ ಬೇಕಾಗುವುದು ಸಾಮಾನ್ಯವಾಗಿದೆ.

ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿರುವುದಲ್ಲಿ ಯಾವುದೇ ಸರಕಾರಿ ಯಂತ್ರ ದುರುಪಯೋಗವಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕನಾಗಿರುವ ರಮಾನಾಥ ರೈ ಅವರಿಗೆ ಇದರಲ್ಲಿ ರಾಜಕೀಯ ದೃಷ್ಟಿಕೋನದಿಂದ ದುರುಪಯೋಗ ಆಗಿರುವಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಮೂರ್ತಿ ಪೂಜೆಯನ್ನ ನಿಷೇಧ ಮಾಡಿರುವ ಮುಸ್ಲಿಂ ಸಮಾಜದ ಓಲೈಕೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಎಂಬ ಕಾರ್ಯಕ್ರಮ ಆರಂಭಿಸಿ ಮುಸ್ಲಿಮ್ ಸಮಾಜದಲ್ಲಿ ವಿರೋಧ ಎದುರಿಸುವಂತಾಗಿದೆ. ಹಿರಿಯ ರಾಜಕಾರಣಿ ಇಬ್ರಾಹಿಂ ಅವರು ಟಿಪ್ಪುವಿನ ಮೂರ್ತಿಯನ್ನು ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದು ಸರಿಯಾಗಿದೆ.

ಕರಾವಳಿ ಭಾಗ ಮಡಿಕೇರಿ ಹಾಗೂ ರಾಜ್ಯದಾದ್ಯಂತ ನೂರಾರು ದೇವಸ್ಥಾನಗಳ ನಾಶಕ್ಕೆ ಕಾರಣವಾದ ಹಾಗೂ ಅಮಾಯಕ ಹಿಂದುಗಳ ಸಾಮೂಹಿಕ ಕಗ್ಗೊಲೆ ನಡೆಸಿರುವ ಟಿಪ್ಪು ಜಯಂತಿ ಕಾರ್ಯಕ್ರಮ ಭಾರತಕ್ಕೆ ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು